Muddebihal: Patil elected president, Ramodagi unopposed as vice president

Muddebihal: ಪಾಟೀಲ್ ಅಧ್ಯಕ್ಷ, ರಾಮೋಡಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Muddebihal: ಪಾಟೀಲ್ ಅಧ್ಯಕ್ಷ, ರಾಮೋಡಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳ ಗ್ರಾಮದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧ ಆಯ್ಕೆಯಾದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಹಿರೇಮುರಾಳದಲ್ಲಿ ಸಂಘದ ಕಚೇರಿಯಲ್ಲಿ ಸೋಮುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ ರಾಮೋಡಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಘೋಷಿಸಿದರು.

ನೂತನ ಅಧ್ಯಕ್ಷ ಮಲ್ಲನಗೌಡ ಬಿ ಪಾಟೀಲ್ ಮಾತನಾಡಿ,ಸಂಘದ ಸ್ವಂತ ಕಟ್ಟಡದ ಕಾಮಗಾರಿ ಚಾಲನೆಯಲ್ಲಿದ್ದು ಕೆಲವೇ ತಿಂಗಳಲ್ಲಿ ನೂತನ ಕಟ್ಟಡ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಮರೇಶ ಬಿ.ಬಾಗೇವಾಡಿ ಮತ್ತು ಸಿಬ್ಬಂದಿ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಸನ್ಮಾನಿಸಿದರು.

ಇದನ್ನೂ ಓದಿ: ‘ಶಾಸಕರೇ ಉತ್ತರ ಕೊಡಲಿ, ಅವರ ಬಾಲಂಗೋಚಿಗಳಲ್ಲ’-ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ

ಸಂಘದ ನಿರ್ದೇಶಕರು, ಮುಖಂಡರಾದ ಗಿರೀಶಗೌಡ ಪಾಟೀಲ್, ನಾಗರಾಜ ರಾಮೋಡಗಿ, ರಮೇಶ ವಗ್ಗರ, ಮಲ್ಲಣ್ಣ ರಕ್ಕಸಗಿ, ಬಿ.ಬಿ.ಪಾಟೀಲ್ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ : ತೆರಿಗೆ ವಸೂಲಾತಿಯಲ್ಲಿ ಶೇ.100% ಪ್ರಗತಿ: ಗ್ರಾ.ಪಂ ನೌಕರರಿಗೆ ಸನ್ಮಾನ

ಮುದ್ದೇಬಿಹಾಳ : ತೆರಿಗೆ ವಸೂಲಾತಿಯಲ್ಲಿ ಶೇ.100% ಪ್ರಗತಿ: ಗ್ರಾ.ಪಂ ನೌಕರರಿಗೆ ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಗ್ರಾಪಂನ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಗುರಿಗೆ ಮೀರಿ ವಸೂಲಾತಿಯಲ್ಲಿ ಶೇ.100%

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಡಿ.13 ರಂದು ಜಲಾನಯನ ಮಹೋತ್ಸವ-2025

ಮುದ್ದೇಬಿಹಾಳ : ಜಲಾನಯನ ಇಲಾಖೆ,ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಡಿ.13 ರಂದು ಮದ್ಯಾಹ್ನ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

ವಿಶಾಖಪಟ್ಟಣ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat kohli) ಅವರು ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಿರುವ ಸಂಗತಿ. ಹಾಗೇ ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿಲ್ಲ. IND vs SA Match ಹೌದು, ಪ್ರಸ್ತುತ ವಿಶಾಖಪಟ್ಟಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಇಂತಹದೊಂದು ಘಟನೆ

ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಮುದ್ದೇಬಿಹಾಳ : ದೇಶದಲ್ಲಿ ಬಡವ,ಬಲ್ಲಿದನಿಗೂ ಒಂದೇ ಮತಕ್ಕೆ ಅವಕಾಶ ಕಲ್ಪಿಸಿ ಮಹಿಳೆಯರಿಗೆ ಸಮಾನತೆಯ ಹಕ್ಕನ್ನು ನೀಡಿದ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಹಶೀಲ್ದಾರ್ ಕೀರ್ತಿ ಚಾಲಕ್, ಸಿಪಿಐ ಮೊಹ್ಮದಫಸಿವುದ್ದೀನ,ಬಿಇಒ ಬಿ.ಎಸ್.ಸಾವಳಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,ದಲಿತಪರ,ಪ್ರಗತಿಪರ