ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು