ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

Ad
Ad

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500