ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ ಪಿಕೆಪಿಎಸ್ ವಾರ್ಷಿಕ ಸಭೆ: ರೈತರು ಪಡೆದ ಸಾಲ ಸಕಾಲಕ್ಕೆ ಮರಳಿಸಿ-ಬಡದಾನಿ

ಮುದ್ದೇಬಿಹಾಳ : ರೈತರು ಕೃಷಿ ಚಟುವಟಿಕೆಗಳಿಗೆಂದು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಸಂಘಗಳಿಗೆ ತುಂಬಿದರೆ ಸಂಘದ ಆರ್ಥಿಕ ಸ್ಥಿತಿಯ ಜೊತೆಗೆ ಸಹಕಾರಿ ಸಂಘಗಳು ರೈತರ ಮೇಲಿನ ವಿಶ್ವಾಸ ಅಧಿಕಗೊಳಿಸುವಂತೆ ಮಾಡುತ್ತವೆ ಎಂದು ವಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಬಸವರಾಜ ಬಡದಾನಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕುಂಟೋಜಿಯಲ್ಲಿ ಸೋಮವಾರ ಆಯೋಜಿಸಿದ್ದ ಮುದ್ದೇಬಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ವಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುದ್ದೇಬಿಹಾಳ ಪಿ.ಕೆ.ಪಿ.ಎಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿ.ಬಿ.ಅಗ್ಗಿಮಠ ಮಾತನಾಡಿ, 1976ರಲ್ಲಿ 150 ಸದಸ್ಯರಿಂದ 25 ಸಾವಿರ ರೂ. ಶೇರು ಬಂಡವಾಳದಿಂದ ವ್ಯವಸಾಯ ಸೇವಾ ಸಹಕಾರಿ ಸಂಘವೆಂದು ಆರಂಭಗೊಂಡು ಇಂದು 2278 ಸದಸ್ಯರನ್ನು ಹೊಂದಿದ್ದು ರೈತರಿಗೆ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ 706.72 ಲಕ್ಷ ರೂ.ಸಾಲ ಒದಗಿಸಿದೆ.

ಸಂಘವು 6.60 ಲಕ್ಷ ಲಾಭ ಗಳಿಸಿದ್ದು ಸಂಘದ ನಿರ್ದೇಶಕಿಯರಾದ ನಂದಾ ಮಲ್ಲಿಕಾರ್ಜುನ ಬಾಗೇವಾಡಿ ಅವರು ಸಂಘಕ್ಕೆ ಒಂದು ಟೇಬಲ್ ಹಾಗೂ 12 ಖುರ್ಚಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನಿರ್ದೇಶಕ ಎಂ.ಎಸ್.ಬಿರಾದಾರ ಮಾತನಾಡಿದರು.

ಸಂಘದ ಅಧ್ಯಕ್ಷ ಶಿವಾನಂದ ಹುಲಗಣ್ಣಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಈರಪ್ಪ ಬಿರಾದಾರ, ಪರಶುರಾಮ ಮಡಿವಾಳರ, ಅಪ್ಪಾಜಯ್ಯ ಕೊಡೇಕಲ್‌ಮಠ, ಗಂಗಾಬಾಯಿ ಬಿರಾದಾರ, ಈರಣ್ಣ ಪಣೇದಕಟ್ಟಿ, ಸೋಮಲಿಂಗಪ್ಪ ಗಸ್ತಿಗಾರ, ಪ್ರದೀಪ ಸುಧಾಕರ, ಶರಣಬಸ್ಸು ಪಲ್ಲೇದ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಚ್.ರಾಠೋಡ, ಸಿಬ್ಬಂದಿ ಭಾರತಿ ನಾಟೇಕಾರ, ನಿಂಗಪ್ಪ ಮಡಿವಾಳರ ಹಾಗೂ ಸಂಘದ ವ್ಯಾಪ್ತಿಯ ಅಬ್ಬಿಹಾಳ, ಕುಂಟೋಜಿ, ಮುದ್ದೇಬಿಹಾಳ, ಶಿರೋಳ, ಹೊಕ್ರಾಣಿ ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ