ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾಗರಿಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಲಸಿಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಡಿ.21ರಂದು ಬೂತ್ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು ನಂತರ ಮೂರು ದಿನ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ ಎಂದರು.

ಲಸಿಕಾ ಅಭಿಯಾನದ ಎರಡು ದಿನ ಮುನ್ನ ಎಲ್ಲ ಲಸಿಕಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರತಿ ಗ್ರಾಮಗಳಲ್ಲಿ ಕರಪತ್ರ, ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆಯೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮೇಲ್ವಿಚಾರಕರು ಅಭಿಯಾನದಲ್ಲಿ ಎಲ್ಲರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸೂಚಿಸಿದರು.

ಪಲ್ಸ್ ಪೋಲಿಯೊ ಆಂದೋಲನ ಕುರಿತು ತಾಲ್ಲೂಕು ವೈದ್ಯಾಧಿಕಾರಿ ಡಾ. ಸತೀಶ ತಿವಾರಿ ಮಾತನಾಡಿ, ತಾಲ್ಲೂಕಿನಾದ್ಯಂತ 5 ವರ್ಷದೊಳಗಿನ ಒಟ್ಟು 39,370 ಮಕ್ಕಳು ಲಸಿಕೆ ಪಡೆಯಲಿದ್ದು, ಒಟ್ಟು 207 ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ 6 ಮೊಬೈಲ್ ಟೀಮ್ ಗಳನ್ನೂ ಕೂಡ ಸ್ಥಾಪಿಸಲಾಗಿದೆ. ಪ್ರತಿ ಬೂತ್‌ಗೆ ಇಬ್ಬರು ಸದಸ್ಯರು, ಐದು ತಂಡಕ್ಕೆ ಒಬ್ಬ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದು, ಪ್ರತಿ ಬೂತ್ ಮಟ್ಟದ ವ್ಯಾಪ್ತಿಯ ಮನೆಗಳಿಗೆ ತೆರಳಿ ಪೋಲಿಯೋ ಹನಿ ಹಾಕಲಿದ್ದಾರೆ. ಲಸಿಕಾ ಕಾರ್ಯಕ್ರಮಕ್ಕೆ 414 ಸಿಬ್ಬಂದಿ,40 ಜನ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ,ಆರ್.ಬಿ.ಎಸ್.ಕೆ ವೈದ್ಯ ಡಾ. ಪ್ರವೀಣ್ ಸುಣಕಲ್, ಡಾ. ಭಾಗ್ಯಶ್ರೀ ಬಿರಾದಾರ, ಡಾ.ರೇಖಾ ಹಯ್ಯಾಳ, ಕೃಷಿ ಅಧಿಕಾರಿ ಸುರೇಶ್ ಭಾವಿಕಟ್ಟಿ, ಅಕ್ಷರ ದಾಸೋಹ ಅಧಿಕಾರಿ ಎಂ.ಎA.ಬೆಳಗಲ್,ಶಿಕ್ಷಣ ಇಲಾಖೆ ಅಧಿಕಾರಿ ಪಿ.ಎ.ಬಾಳಿಕಾಯಿ,ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ,ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಲಕ್ಷಿö್ಮÃ ಬಡಿಗೇರ, ಪೊಲೀಸ್ ಇಲಾಖೆಯ ಎಎಸ್‌ಐ ಕೆ.ಎಸ್.ಅಸ್ಕಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜಿ.ಮಠ.ಪುರಸಭೆ ಸಮುದಾಯ ಸಂಘಟಕ ವಿನೋದ ಝಿಂಗಾಡೆ,ವಿನೋದ್ ಜಿಂಗಾಡೆ, ಬಾಲಾಜಿ ಶುಗರ್ಸ್ ಸಿಬ್ಬಂದಿ ವೀರಣ್ಣ ಹೆಬ್ಬಾಳ,ಆರೋಗ್ಯ ಇಲಾಖೆಯ ಸಿಬ್ಬಂದಿ ಎಂ.ಎಸ್.ಗೌಡರ ಮೊದಲಾದವರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,