ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾಗರಿಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಲಸಿಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಡಿ.21ರಂದು ಬೂತ್ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು ನಂತರ ಮೂರು ದಿನ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ ಎಂದರು.

ಲಸಿಕಾ ಅಭಿಯಾನದ ಎರಡು ದಿನ ಮುನ್ನ ಎಲ್ಲ ಲಸಿಕಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರತಿ ಗ್ರಾಮಗಳಲ್ಲಿ ಕರಪತ್ರ, ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆಯೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮೇಲ್ವಿಚಾರಕರು ಅಭಿಯಾನದಲ್ಲಿ ಎಲ್ಲರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸೂಚಿಸಿದರು.

ಪಲ್ಸ್ ಪೋಲಿಯೊ ಆಂದೋಲನ ಕುರಿತು ತಾಲ್ಲೂಕು ವೈದ್ಯಾಧಿಕಾರಿ ಡಾ. ಸತೀಶ ತಿವಾರಿ ಮಾತನಾಡಿ, ತಾಲ್ಲೂಕಿನಾದ್ಯಂತ 5 ವರ್ಷದೊಳಗಿನ ಒಟ್ಟು 39,370 ಮಕ್ಕಳು ಲಸಿಕೆ ಪಡೆಯಲಿದ್ದು, ಒಟ್ಟು 207 ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ 6 ಮೊಬೈಲ್ ಟೀಮ್ ಗಳನ್ನೂ ಕೂಡ ಸ್ಥಾಪಿಸಲಾಗಿದೆ. ಪ್ರತಿ ಬೂತ್‌ಗೆ ಇಬ್ಬರು ಸದಸ್ಯರು, ಐದು ತಂಡಕ್ಕೆ ಒಬ್ಬ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದು, ಪ್ರತಿ ಬೂತ್ ಮಟ್ಟದ ವ್ಯಾಪ್ತಿಯ ಮನೆಗಳಿಗೆ ತೆರಳಿ ಪೋಲಿಯೋ ಹನಿ ಹಾಕಲಿದ್ದಾರೆ. ಲಸಿಕಾ ಕಾರ್ಯಕ್ರಮಕ್ಕೆ 414 ಸಿಬ್ಬಂದಿ,40 ಜನ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ,ಆರ್.ಬಿ.ಎಸ್.ಕೆ ವೈದ್ಯ ಡಾ. ಪ್ರವೀಣ್ ಸುಣಕಲ್, ಡಾ. ಭಾಗ್ಯಶ್ರೀ ಬಿರಾದಾರ, ಡಾ.ರೇಖಾ ಹಯ್ಯಾಳ, ಕೃಷಿ ಅಧಿಕಾರಿ ಸುರೇಶ್ ಭಾವಿಕಟ್ಟಿ, ಅಕ್ಷರ ದಾಸೋಹ ಅಧಿಕಾರಿ ಎಂ.ಎA.ಬೆಳಗಲ್,ಶಿಕ್ಷಣ ಇಲಾಖೆ ಅಧಿಕಾರಿ ಪಿ.ಎ.ಬಾಳಿಕಾಯಿ,ತಾಪಂ ಯೋಜನಾಧಿಕಾರಿ ಖೂಭಾಸಿಂಗ ಜಾಧವ,ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಲಕ್ಷಿö್ಮÃ ಬಡಿಗೇರ, ಪೊಲೀಸ್ ಇಲಾಖೆಯ ಎಎಸ್‌ಐ ಕೆ.ಎಸ್.ಅಸ್ಕಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜಿ.ಮಠ.ಪುರಸಭೆ ಸಮುದಾಯ ಸಂಘಟಕ ವಿನೋದ ಝಿಂಗಾಡೆ,ವಿನೋದ್ ಜಿಂಗಾಡೆ, ಬಾಲಾಜಿ ಶುಗರ್ಸ್ ಸಿಬ್ಬಂದಿ ವೀರಣ್ಣ ಹೆಬ್ಬಾಳ,ಆರೋಗ್ಯ ಇಲಾಖೆಯ ಸಿಬ್ಬಂದಿ ಎಂ.ಎಸ್.ಗೌಡರ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ