ಹಿಂದೂ ಸಮ್ಮೇಳನಕ್ಕೆ ಜನಸಾಗರ : ರಾಜ್ಯಕ್ಕೆ ಮಾದರಿಯಾಯ್ತು ಮುದ್ದೇಬಿಹಾಳದ ಶೋಭಾಯಾತ್ರೆ

ಹಿಂದೂ ಸಮ್ಮೇಳನಕ್ಕೆ ಜನಸಾಗರ : ರಾಜ್ಯಕ್ಕೆ ಮಾದರಿಯಾಯ್ತು ಮುದ್ದೇಬಿಹಾಳದ ಶೋಭಾಯಾತ್ರೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಭಾನುವಾರ ನಡೆದ ಹಿಂದೂ ಮಹಾ ಸಮ್ಮೇಳನದ ಭವ್ಯ ಶೋಭಾಯಾತ್ರೆ ರಾಜ್ಯಕ್ಕೆ ಮಾದರಿ ಸಂದೇಶವನ್ನು ರವಾನಿಸಿತು.

ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿ,ಉಪ ಪಂಗಡಗಳ ಜನರು ಶೋಭಾಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡು ತಾವೆಲ್ಲ ಹಿಂದೂ ಧರ್ಮೀಯರು ಒಂದೇ ಎಂದು ಒಗ್ಗಟ್ಟು ಪ್ರದರ್ಶನ ಮಾಡಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಿಂದ ಶರಣ ಸೋಮನಾಳದ ಮಹದೇವಯ್ಯ ಶಾಸ್ತಿಗಳು, ಲಾಲ್‌ಲಿಂಗೇಶ್ವರ ಸ್ವಾಮೀಜಿ ಹಾಗೂ ಗಣ್ಯರು ಮದ್ಯಾಹ್ನ ೩.೪೫ಕ್ಕೆ ಮೆರವಣಿಗೆಗೆ ಚಾಲನೆ ನೀಡಿದರು.ಅಲ್ಲಿಂದ ಆರಂಭಗೊOಡ ಶೋಭಾಯಾತ್ರೆ ಇಂದಿರಾ ವೃತ್ತ, ಮುಖ್ಯರಸ್ತೆ,ದ್ಯಾಮವ್ವನ ಕಟ್ಟೆ,ಬಸವೇಶ್ವರ ವೃತ್ತ,ಬಸ್ ನಿಲ್ದಾಣ,ಕಿತ್ತೂರು ರಾಣಿ ಚೆನ್ನಮ್ಮ ವೃತ್ತ,ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ವಿಬಿಸಿ ಹೈಸ್ಕೂಲ್ ಮೈದಾನವನ್ನು ತಲುಪಿತು.

ಮೆರವಣಿಗೆಯಲ್ಲಿ ಬೊಂಬೆಗಳ ಕುಣಿತ, ಜೋಗತಿ ನೃತ್ಯ, ಭಜನೆ,ಡೊಳ್ಳಿನ ಮೇಳ,ಹೆಜ್ಜೆ ಮೇಳ,ಗೋಕಾಕದ ಜಾಂಚ್ ಮೆರವಣಿಗೆಯಲ್ಲಿ ಗಮನ ಸೆಳೆದರು. ಮೆರವಣಿಗೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಉಪ ಪಂಗಡಗಳ ವೃತ್ತಿಗೆ ಸಂಬAಧಿಸಿದ ರೂಪಕಗಳು ಮೆರವಣಿಗೆಯಲ್ಲಿ ಸಾಗಿದವು.ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಶೋಭೆ ತಂದರು.

ಪ್ರಮುಖರಾದ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ,ಮಲಕೇಂದ್ರಗೌಡ ಪಾಟೀಲ,ಜಿಪಂ ಮಾಜಿ ಸದಸ್ಯ ಹೇಮರಡ್ಡಿ ಮೇಟಿ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಯುವ ಮುಖಂಡ ಭರತಗೌಡ ಪಾಟೀಲ ನಡಹಳ್ಳಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ,ಕೆಯುಸಿ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ರವಿ ಎನ್.ನಾಯಕ,ಪರಶುರಾಮ ನಾಲತವಾಡ,ಬಹಾದ್ದೂರ ರಾಠೋಡ, ಮೊದಲಾದವರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಪೊಲೀಸ್ ಭದ್ರತೆ :ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ನೇತೃತ್ವದಲ್ಲಿ ಸಿಪಿಐ ಮೊಹ್ಮದ ಫಸಿವುದ್ದೀನ, ಮುದ್ದೇಬಿಹಾಳ ಪಿಎಸೈ ಸಂಜಯ ತಿಪರೆಡ್ಡಿ, ತಾಳಿಕೋಟಿ ಪಿಎಸೈ ಜ್ಯೋತಿ ಖೋತ ಸೇರಿದಂತೆ ನೂರಾರು ಪೊಲೀಸರು ಬಿಗಿ ಭದ್ರತೆ ವಹಿಸಿದ್ದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ