Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ