Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ