Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ