Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ