Muddebihal: Take up sports as a hobby - enjoy them

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Ad
Ad

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಗಳ ಗುಂಪು ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಸದಸ್ಯರಾದ ವಾಯ್. ಎಚ್. ವಿಜಯಕರ್,ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾಮನೋಭಾವದಿಂದ ಆಟಗಳನ್ನು ಆಡಬೇಕೆಂದರು.

ಕ್ರೀಡಾ ಧ್ವಜವನ್ನು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಬಿ.ಕೆ.ಬಿರಾದಾರ ಸ್ವೀಕರಿಸಿದರು. ದೈಹಿಕ ಉಪನ್ಯಾಸಕ ಯು.ಸಿ. ಕೋನರೆಡ್ಡಿ ಕ್ರೀಡಾಧ್ವಜಾರೋಹಣ ನಡೆಸಿಕೊಟ್ಟರು. ದೈಹಿಕ ಉಪನ್ಯಾಸಕರಾದ ಬಿ. ಟಿ ಭಜಂತ್ರಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪಿಯು ಕಾಲೇಜ ಪ್ರಾಂಶುಪಾಲ ಎಸ್.ಎಸ್.ಅಂಗಡಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಎಸ್.ಡಿ.ಆರ್ ಸಂಸ್ಥೆಯ ಅಧ್ಯಕ್ಷ ವೆಂಕನಗೌಡ ಪಾಟೀಲ, ಸೇವಾಲಾಲ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್.ಎನ್. ನಾಯಕ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಆರ್.ಬಿ.ರೂಡಗಿ ಇದ್ದರು.

ಎಂಜಿಎಂಕೆ ಪ್ರಾಂಶುಪಾಲ ಎಸ್.ಕೆ. ಹರನಾಳರವರು ಸ್ವಾಗತ ಭಾಷಣ ಮಾಡಿದರು. ಉಪನ್ಯಾಸಕ ಬಿ.ಆರ್ ಬೆಳ್ಳಿಕಟ್ಟಿ ನಿರೂಪಿಸಿದರು.

ಕ್ರೀಡಾಕೂಟಗಳ ಫಲಿತಾಂಶ ಇಂತಿದೆ:

ಬಾಲಕರ ವಿಭಾಗದಲ್ಲಿ ಖೋ ಖೋ: ಪ್ರಥಮ-ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ಕಬಡ್ಡಿ: ಪ್ರಥಮ-ಎಸ್.ಎಸ್.ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ ರಕ್ಕಸಗಿ, ವ್ಹಾಲಿಬಾಲ್: ಪ್ರಥಮ-ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ-ಎಕ್ಷಫರ್ಟ್ ಪಿಯು ಕಾಲೇಜ, ನಾಗರಬೆಟ್ಟ, ಬಾಲಕಿಯರ ವಿಭಾಗದಲ್ಲಿ ಖೋ ಖೋ ಪ್ರಥಮ: ಎಂಜಿವಿಸಿ ಪಿಯು ಕಾಲೇಜ, ಮುದ್ದೇಬಿಹಾಳ, ದ್ವಿತೀಯ: ಶ್ರೀ ವಿರೇಶ್ವರ ಪಿಯು ಕಾಲೇಜ, ನಾಲತವಾಡ, ಕಬಡ್ಡಿ: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ: ಸರ್ಕಾರಿ ಪಿಯು ಕಾಲೇಜ, ಮುದ್ದೇಬಿಹಾಳ, ವ್ಹಾಲಿಬಾಲ್: ಪ್ರಥಮ- ಎಸ್.ಎಸ್. ಪಿಯು ಕಾಲೇಜ ಮುದ್ದೇಬಿಹಾಳ, ದ್ವಿತೀಯ- ಸರ್ಕಾರಿ ಪಿಯು ಕಾಲೇಜ, ಬಸರಕೊಡ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500