ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ಗ್ರಾಮ ಪಂಚಾಯತಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್ ಆದೇಶ ಹೊರಡಿಸಿದ್ದಾರೆ.

ಸನ್ 2026-2031ರ ಅವಧಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಸದರಿ ಪಂಚಾಯಿತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(iii) ಅನ್ವಯ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಲಾಗಿದೆ.

ಮುದ್ದೇಬಿಹಾಳ ತಾಲ್ಲೂಕು ವ್ಯಾಪ್ತಿಯ ಗ್ರಾಪಂಗಳು,ಆಡಳಿತಾಧಿಕಾರಿಗಳ ವಿವರ:
ಮಡಿಕೇಶ್ವರ ಗ್ರಾಪಂನ ಅವಧಿ ಫೆ.4ರಂದು ಕೊನೆಗೊಂಡಿದ್ದು ಇಲ್ಲಿಗೆ ತಾಲ್ಲೂಕು ಪಂಚಾಯಿತಿ ಇಒ ವೆಂಕಟೇಶ ವಂದಾಲ,ಢವಳಗಿ ಹಾಗೂ ರೂಢಗಿ ಗ್ರಾಪಂನ ಅವಧಿ ಫೆ.3ರಂದು ಕೊನೆಗೊಂಡಿದ್ದು ಇಲ್ಲಿಗೆ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಎಸ್.ಹಿರೇಗೌಡರ, ಬಸರಕೋಡ ಗ್ರಾಪಂನ ಅವಧಿ ಫೆ.5ರಂದು ಕೊನೆಗೊಂಡಿದ್ದು ಇಲ್ಲಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ಅವರನ್ನು ನಿಯೋಜಿಸಲಾಗಿದೆ.
ಬಿದರಕುಂದಿ ಗ್ರಾಪಂನ ಅವಧಿ ಫೆ.7ರಂದು, ಕುಂಟೋಜಿ ಗ್ರಾಪಂನ ಅವಧಿ ಫೆ.3ರಂದು ಕೊನೆಗೊಂಡಿದ್ದು ಇಲ್ಲಿಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎo.ಬೆಳಗಲ್ಲ, ಅಡವಿ ಸೋಮನಾಳ ಗ್ರಾಪಂ ಅವದಿ ಫೆ.4 ರಂದು ಕೊನೆಗೊಂಡಿದ್ದು ಇಲ್ಲಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ, ಕವಡಿಮಟ್ಟಿ ಗ್ರಾಪಂನ ಅವಧಿ ಫೆ.2ರಂದು ಕೊನೆಗೊಂಡಿದ್ದು ಇಲ್ಲಿಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ಎ.ಬಿ.ರೆಡ್ಡಿ, ಹಡಲಗೇರಿ ಗ್ರಾಪಂನ ಅವಧಿ ಫೆ.4ರಂದು ಕೊನೆಗೊಂಡಿದ್ದು ಇಲ್ಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತೀರ್ಣಾಧಿಕಾರಿ ಶಿವಲೀಲಾ ಕೊಣ್ಣೂರ ಅವರನ್ನು ನಿಯೋಜಿಸಲಾಗಿದೆ.
ಹುಲ್ಲೂರ ಗ್ರಾಪಂನ ಅವಧಿ ಫೆ.5ರಂದು ಕೊನೆಗೊಂಡಿದ್ದು ಇಲ್ಲಿಗೆ ಪಂಚಾಯತ್ ಇಂಜನಿಯರಿoಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವರಾಜ ನಾಯಕ, ಕಾಳಗಿ ಗ್ರಾಪಂನ ಅವಧಿ ಫೆ.7ರಂದು ಕೊನೆಗೊಂಡಿದ್ದು ಇಲ್ಲಿಗೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ, ಯರಝರಿ ಗ್ರಾಪಂನ ಅವಧಿ ಫೆ.3ರಂದು ಕೊನೆಗೊಂಡಿದ್ದು ಇಲ್ಲಿಗೆ ಸಹಾಯಕ ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ಅವರನ್ನು ನಿಯೋಜಿಸಲಾಗಿದೆ.
ಹಿರೇಮುರಾಳ ಗ್ರಾಪಂನ ಅವಧಿ ಫೆ.5ರಂದು ಕೊನೆಗೊಂಡಿದ್ದು ಇಲ್ಲಿಗೆ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಗಿರೀಶ ಹಲಕುಡೆ, ನಾಗಬೇನಾಳ ಗ್ರಾಪಂನ ಅವಧಿ ಫೆ.4ರಂದು ಕೊನೆಗೊಂಡಿದ್ದು ಇಲ್ಲಿಗೆ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಸುರೇಶ ಭಜಂತ್ರಿ, ಕೋಳೂರು ಗ್ರಾಪಂನ ಅವಧಿ ಫೆ.5ರಂದು ಕೊನೆಗೊಂಡಿದ್ದು ಇಲ್ಲಿಗೆ ಅಬಕಾರಿ ಉಪ ನಿರೀಕ್ಷಕ ಮಲ್ಲಿಕಾರ್ಜುನ ಹಗಳಗಾರ, ತಂಗಡಗಿ ಗ್ರಾಪಂನ ಅವಧಿ ಫೆ.4ರಂದು ಕೊನೆಗೊಂಡಿದ್ದು ಇಲ್ಲಿಗೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜಶೇಖರ ಹಾದಿಮನಿ, ಆಲೂರ ಗ್ರಾಪಂನ ಅವಧಿ ಫೆ.3ರಂದು ಕೊನೆಗೊಂಡಿದ್ದು ಇಲ್ಲಿಗೆ ಮುದ್ದೇಬಿಹಾಳ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರನ್ನು ನಿಯೋಜಿಸಲಾಗಿದೆ.
ಬಿಜ್ಜೂರ ಗ್ರಾಪಂನ ಅವಧಿ ಫೆ.4ರಂದು ಕೊನೆಗೊಂಡಿದ್ದು ಇಲ್ಲಿಗೆ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಶಿವಾನಂದ ಮೇಟಿ, ರಕ್ಕಸಗಿ ಗ್ರಾಪಂನ ಅವಧಿ ಫೆ.4ರಂದು ಕೊನೆಗೊಂಡಿದ್ದು ಇಲ್ಲಿಗೆ ತಾಳಿಕೋಟಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ರಾಜು ಎಸ್.ರಾಠೋಡ, ನಾಗರಬೆಟ್ಟ ಗ್ರಾಪಂನ ಅವಧಿ ಫೆ.5ರಂದು ಕೊನೆಗೊಂಡಿದ್ದು ಇಲ್ಲಿಗೆ ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಅವರನ್ನು ನಿಯೋಜಿಸಿ ಡಿಸಿ ಆದೇಶಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ