Muddebihal Uppinbetageri swamiji inaugurated cooperative society

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ


ಮುದ್ದೇಬಿಹಾಳ : ಶರಣ ವೀರೇಶ್ವರರ ಹೆಸರಿನಲ್ಲಿ (Muddebihal) ಸ್ಥಾಪಿತವಾದ ಬ್ಯಾಂಕ್‌ನಿಂದ ರೈತರು, ವ್ಯಾಪಾರಿಗಳ ಆರ್ಥಿಕ ಚೈತನ್ಯಕ್ಕೆ ಸಹಕಾರ ನೀಡುವ ಕಾರ್ಯ ಮುಂದೆ ಸಾಗಲಿ ಎಂದು ಉಪ್ಪಿನಬೆಟಗೇರಿ ವಿರುಪಾಕ್ಷ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ದಾನೇಶ್ವರಿ ಪೆಟ್ರೋಲ್ ಹಿಂಭಾಗದಲ್ಲಿ ಬುಧವಾರ ನಾಲತವಾಡದ ಶರಣ ವೀರೇಶ್ವರ ಬ್ಯಾಂಕ್ ನೂತನ ಶಾಖೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿವಯೋಗಮಂದಿರದಲ್ಲಿ ಶರಣ ವೀರೇಶ್ವರರ ಪುತ್ಥಳಿ ಅವರ ಹೆಸರಿನ ಉದ್ಯಾನವನ ಇದೆ. ಅಲ್ಲಿ ಜಂಗಮ ವಟುಗಳಿಗೆ ಪಾಠ ಶಾಲೆಯಾಗಿದ್ದು ಶ್ರೇಷ್ಠ ಶರಣರ ಹೆಸರಿನಲ್ಲಿ ಬ್ಯಾಂಕು ಉತ್ತಮ ಅಭಿವೃದ್ಧಿ ಹೊಂದಿದೆ ಎಂದರು.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಮಾತನಾಡಿ, ದಿ.ಬಿ.ಎಂ.ಅಂಗಡಿ ಅವರು ಹುಟ್ಟು ಹಾಕಿದ ಬ್ಯಾಂಕು ಇಂದು ಹೆಮ್ಮರವಾಗಿ ಬೆಳೆದಿದೆ.ಬ್ಯಾಂಕುಗಳ ಆರ್ಥಿಕ ಸದೃಢತೆಗೆ ಗ್ರಾಹಕರ ನಿಯಮಿತ ವ್ಯವಹಾರ ಆಧಾರವಾಗಿದೆ ಎಂದರು.

ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್, ಗಣ್ಯ ವರ್ತಕ ಬಿ.ಸಿ.ಮೋಟಗಿ,ಸಲಹಾ ಸಮಿತಿ ಪ್ರಮುಖ ಶಾಂತಪ್ಪ ಕಮತ, ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ, ಬ್ಯಾಂಕ ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಇದ್ದರು.ಡಿ.ಆರ್.ಮಳಖೇಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೀರೇಶ ಬಂಗಾರಗುಂಡ ವಚನಗೀತೆಗೆ ಭರತನಾಟ್ಯ ನೃತ್ಯಗೈದರು. ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು. ರಾಜು ಹಾದಿಮನಿ ನಿರೂಪಿಸಿದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ