Muddebihal Uppinbetageri swamiji inaugurated cooperative society

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ


ಮುದ್ದೇಬಿಹಾಳ : ಶರಣ ವೀರೇಶ್ವರರ ಹೆಸರಿನಲ್ಲಿ (Muddebihal) ಸ್ಥಾಪಿತವಾದ ಬ್ಯಾಂಕ್‌ನಿಂದ ರೈತರು, ವ್ಯಾಪಾರಿಗಳ ಆರ್ಥಿಕ ಚೈತನ್ಯಕ್ಕೆ ಸಹಕಾರ ನೀಡುವ ಕಾರ್ಯ ಮುಂದೆ ಸಾಗಲಿ ಎಂದು ಉಪ್ಪಿನಬೆಟಗೇರಿ ವಿರುಪಾಕ್ಷ ಸ್ವಾಮೀಜಿ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ದಾನೇಶ್ವರಿ ಪೆಟ್ರೋಲ್ ಹಿಂಭಾಗದಲ್ಲಿ ಬುಧವಾರ ನಾಲತವಾಡದ ಶರಣ ವೀರೇಶ್ವರ ಬ್ಯಾಂಕ್ ನೂತನ ಶಾಖೆಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿವಯೋಗಮಂದಿರದಲ್ಲಿ ಶರಣ ವೀರೇಶ್ವರರ ಪುತ್ಥಳಿ ಅವರ ಹೆಸರಿನ ಉದ್ಯಾನವನ ಇದೆ. ಅಲ್ಲಿ ಜಂಗಮ ವಟುಗಳಿಗೆ ಪಾಠ ಶಾಲೆಯಾಗಿದ್ದು ಶ್ರೇಷ್ಠ ಶರಣರ ಹೆಸರಿನಲ್ಲಿ ಬ್ಯಾಂಕು ಉತ್ತಮ ಅಭಿವೃದ್ಧಿ ಹೊಂದಿದೆ ಎಂದರು.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್ ಮಾತನಾಡಿ, ದಿ.ಬಿ.ಎಂ.ಅಂಗಡಿ ಅವರು ಹುಟ್ಟು ಹಾಕಿದ ಬ್ಯಾಂಕು ಇಂದು ಹೆಮ್ಮರವಾಗಿ ಬೆಳೆದಿದೆ.ಬ್ಯಾಂಕುಗಳ ಆರ್ಥಿಕ ಸದೃಢತೆಗೆ ಗ್ರಾಹಕರ ನಿಯಮಿತ ವ್ಯವಹಾರ ಆಧಾರವಾಗಿದೆ ಎಂದರು.

ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ,ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್, ಗಣ್ಯ ವರ್ತಕ ಬಿ.ಸಿ.ಮೋಟಗಿ,ಸಲಹಾ ಸಮಿತಿ ಪ್ರಮುಖ ಶಾಂತಪ್ಪ ಕಮತ, ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ, ಬ್ಯಾಂಕ ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಇದ್ದರು.ಡಿ.ಆರ್.ಮಳಖೇಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೀರೇಶ ಬಂಗಾರಗುಂಡ ವಚನಗೀತೆಗೆ ಭರತನಾಟ್ಯ ನೃತ್ಯಗೈದರು. ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು. ರಾಜು ಹಾದಿಮನಿ ನಿರೂಪಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು