ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್