ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ