ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ