ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ ಆಕಾಶ ಹರಿಜನ (10) ಕಳೆದ ಮಾರ್ಚ್ 22ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಬಾಲಕನನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ