ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಆರೋಗ್ಯದ ಕಡೆ ಲಕ್ಷö್ಯವಿಟ್ಟು ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಎಂಬಿಎಲ್ ಗ್ರೂಪ್ಸ್ನಿಂದ ಚಾಂಪಿಯನ್ ಟ್ರೋಫಿ-2026 ಹಾರ್ಡಬಾಲ್ ಟೆನ್ನಿಸ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೆಳೆಯರ ಬಳಗದಿಂದ ಆಯೋಜಿಸಿದ ಕ್ರಿಕೇಟ್ ಟೂರ್ನಾಮೆಂಟ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಅಹಿಲ್ಯಾದೇವಿ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಬಿಎಎಸ್ ಇಂಟರನ್ಯಾಶನಲ್ ಸ್ಕೂಲ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ನರ್ಸರಿಯಿಂದ ನೌಕರಿಯವರೆಗೆ ಕಲ್ಪನೆಯಡಿ ದೇಶದ ಪ್ರಮುಖ ಯಂತ್ರೋಪಕರಣ ತಯಾರಿಕೆ ಘಟಕಗಳಾದ ಟಾಟಾ,ಐಫೊನ್ ಫಾಕ್ಸಕಾನ್,ಮಹೀಂದ್ರಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಂಪನಿಗಳಲ್ಲಿ ಉದ್ಯೋಗವಕಾಶ ಕಲ್ಪಿಸಲಾಗುತ್ತಿದ್ದು ಅಭ್ಯರ್ಥಿಗಳಿಗೆ