ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ.

ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು ಬೆಳಗ್ಗೆ ನಾಯಿಯೊಂದು ಬೋನಿನೊಳಗಡೆ ಬಿದ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಬುಧವಾರ ಡ್ರೋಣ್ ಕ್ಯಾಮೆರಾ ಮೂಲಕ ಕಾಡುಪ್ರಾಣಿ ಪತ್ತೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಅವರು, ಸದ್ಯದ ಮಟ್ಟಿಗೆ ಕಾಣಿಸಿಕೊಂಡಿರುವ ಕಾಡುಪ್ರಾಣಿ ಮಾನವನ ಮೇಲೆ ದಾಳಿ ಮಾಡುವ ಸಾಧ್ಯತೆ ಕಡಿಮೆ ಇದ್ದು ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಸಾಮಾಜಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸ್.ಜೆ.ಸಂಗಾಲಕ, ಉಪ ಅರಣ್ಯಾಧಿಕಾರಿ ರಾಜೇಂದ್ರ ಹುನ್ನೂರ, ಸಿಬ್ಬಂದಿ ಯಲ್ಲಪ್ಪ ಹಿರೇಕುರುಬರ, ವಿಠ್ಠಲ ಬೋರಟಗಿ, ಪ್ರಜ್ವಲ್ ಶೆಟ್ಟರ, ಲಖನ ಕಲಾಲ, ಮುತ್ತು ಮಾದರ, ಶ್ರೀನಿವಾಸ ಐಹೊಳ್ಳಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಣದ ಕಾಡುಪ್ರಾಣಿ-ಮುಂದುವರೆದ ಆತಂಕ : ಕಾಡುಪ್ರಾಣಿ ಚಿರತೆಯೋ , ಕತ್ತೆಕಿರಬುವೋ ಎಂಬುದು ಈವರೆಗೂ ಖಚಿತವಾಗಿಲ್ಲ. ಅರಣ್ಯ ಇಲಾಖೆಯಿಂದ ಸಾಮಾನ್ಯ ರೀತಿಯಲ್ಲಿ ಯಾವುದೇ ಸುರಕ್ಷಿತ ಸಾಧನಗಳನ್ನು ಉಪಯೋಗಿಸದೇ ಕಾರ್ಯಾಚರಣೆ ಮುಂದುವರೆಸಿರುವುದು ಗ್ರಾಮಸ್ಥರಿಗೆ ತೀವ್ರ ಆತಂಕ ತಂದೊಡ್ಡಿದೆ.

ತಾಲ್ಲೂಕಾಡಳಿತ ಈ ಕಾಡುಪ್ರಾಣಿ ದಾಳಿ ಪ್ರಕರಣವನ್ನು ಹಗುರುವಾಗಿ ಪರಿಗಣಿಸಿರುವುದು ಕಂದಗನೂರು, ಚಿರ್ಚನಕಲ್, ಮುದೂರು, ಯರಝರಿ, ಚಲಮಿ, ಹಂಡರಗಲ್, ನಾಗರಾಳ , ಹರಿಂದ್ರಾಳ ಗ್ರಾಮಗಳ ರೈತರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿ ಕಾಡುಪ್ರಾಣಿ ಪತ್ತೆ ಹಚ್ಚಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest News

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಸಿ.ಎಸ್.ನಾಡಗೌಡರು ವಿಶೇಷ ಮುತುವರ್ಜಿ ವಹಿಸಿ ನಗರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಮುದ್ದೇಬಿಹಾಳ ಪಟ್ಟಣದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಸರ್ಕಾರಿ ಕೈಗಾರಿಕಾ ಹಾಗೂ ಉದ್ಯೋಗ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಗಂಗಮ್ಮ ಚಿನಿವಾರ ಅವರು ಬಂಥನಾಳ ಶಿವಯೋಗಿಗಳ ಮಾತಿನಿಂದ ಪ್ರೇರಿತರಾಗಿ ಶಿಕ್ಷಣಕ್ಕಾಗಿ ತಮ್ಮ ಇಡೀ ಆಸ್ತಿಯನ್ನು ದಾನ