ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ ಅಡಿ ಸ್ಪರ್ಧೆ ಮಾಡಿದ್ದರಿಂದ ಲಗತ್ತಿಸಬೇಕಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸದೇ ಇರುವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಸಹಿ ಮಾಡದೇ ಇದ್ದುದ್ದರಿಂದ ಶಿರಗುಪ್ಪಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ತಿಳಿಸಿದರು.
ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು ನ.23ರವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯುವುದಕ್ಕೆ ಅವಕಾಶ ಇದೆ.ನ.26ರಂದು ಫಲಿತಾಂಶ ಪ್ರಕಟಿಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.
ಕಣದಲ್ಲಿ ಶಾಂತಾ ಮದರಿ ಒಬ್ಬರೇ ಉಳಿದಿದ್ದು ಅವರ ಆಯ್ಕೆ ಆದಂತಾಗಿದೆ.ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಉಳಿದಿದೆ.
ಚುನಾವಣೆಗೆ ಸಹಾಯಕರಾಗಿ ಆಯ್.ಬಿ.ಹಿರೇಮಠ, ಪಿಡಿಒ ಪಿ.ಎಸ್.ನಾಯ್ಕೋಡಿ ಕಾರ್ಯನಿರ್ವಹಿಸಿದರು.ಪೊಲೀಸ್ ಇಲಾಖೆಯಿಂದ ಎಎಸ್ಐ ಎ.ಬಿ.ಟಕ್ಕಳಕಿ, ಶಾಂತಗೌಡ ಬನ್ನೆಟ್ಟಿ ಭದ್ರತೆ ಒದಗಿಸಿದ್ದರು.
ಹಿನ್ನಡೆ : ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯೊಳಗಡೆ ನಾಮಪತ್ರದೊಂದಿಗೆ ಲಗತ್ತಿಸಲು ವಿಫಲರಾಗಿದ್ದಕ್ಕೆ ಕವಿತಾ ಶಿರಗುಪ್ಪಿ ಅವರು ಚುನಾವಣಾ ಕಣದಿಂದ ಹಿನ್ನಡೆ ಅನುಭವಿಸಬೇಕಾಯಿತು.
ಹಾಲಿ,ಮಾಜಿ ಶಾಸಕರಿಂದಲೂ ಮಾಹಿತಿ :
ನಾಮಪತ್ರದೊಂದಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಮಯದಲ್ಲಿ ಉಂಟಾದ ಗೊಂದಲದ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಚುನಾವಣಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!
ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!
Latest News
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ







