ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ ಅಡಿ ಸ್ಪರ್ಧೆ ಮಾಡಿದ್ದರಿಂದ ಲಗತ್ತಿಸಬೇಕಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸದೇ ಇರುವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಸಹಿ ಮಾಡದೇ ಇದ್ದುದ್ದರಿಂದ ಶಿರಗುಪ್ಪಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ತಿಳಿಸಿದರು.

ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು ನ.23ರವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯುವುದಕ್ಕೆ ಅವಕಾಶ ಇದೆ.ನ.26ರಂದು ಫಲಿತಾಂಶ ಪ್ರಕಟಿಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.

ಕಣದಲ್ಲಿ ಶಾಂತಾ ಮದರಿ ಒಬ್ಬರೇ ಉಳಿದಿದ್ದು ಅವರ ಆಯ್ಕೆ ಆದಂತಾಗಿದೆ.ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಉಳಿದಿದೆ.
ಚುನಾವಣೆಗೆ ಸಹಾಯಕರಾಗಿ ಆಯ್.ಬಿ.ಹಿರೇಮಠ, ಪಿಡಿಒ ಪಿ.ಎಸ್.ನಾಯ್ಕೋಡಿ ಕಾರ್ಯನಿರ್ವಹಿಸಿದರು.ಪೊಲೀಸ್ ಇಲಾಖೆಯಿಂದ ಎಎಸ್ಐ ಎ.ಬಿ.ಟಕ್ಕಳಕಿ, ಶಾಂತಗೌಡ ಬನ್ನೆಟ್ಟಿ ಭದ್ರತೆ ಒದಗಿಸಿದ್ದರು.

ಹಿನ್ನಡೆ : ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯೊಳಗಡೆ ನಾಮಪತ್ರದೊಂದಿಗೆ ಲಗತ್ತಿಸಲು ವಿಫಲರಾಗಿದ್ದಕ್ಕೆ ಕವಿತಾ ಶಿರಗುಪ್ಪಿ ಅವರು ಚುನಾವಣಾ ಕಣದಿಂದ ಹಿನ್ನಡೆ ಅನುಭವಿಸಬೇಕಾಯಿತು.

ಹಾಲಿ,ಮಾಜಿ ಶಾಸಕರಿಂದಲೂ ಮಾಹಿತಿ :
ನಾಮಪತ್ರದೊಂದಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಮಯದಲ್ಲಿ ಉಂಟಾದ ಗೊಂದಲದ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಚುನಾವಣಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ