ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ ಹಾಗೂ ಕವಿತಾ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳು ನಡೆಸಿದರು.ಈ ವೇಳೆ ಕವಿತಾ ಶಿರಗುಪ್ಪಿ ಅವರು ಸಲ್ಲಿಸಿದ್ದ ನಾಮಪತ್ರದ ಜೊತೆಗೆ ಮೀಸಲಾತಿ ಅಡಿ ಸ್ಪರ್ಧೆ ಮಾಡಿದ್ದರಿಂದ ಲಗತ್ತಿಸಬೇಕಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸದೇ ಇರುವುದರಿಂದ ಹಾಗೂ ಕೆಲವು ಕಡೆಗಳಲ್ಲಿ ಸಹಿ ಮಾಡದೇ ಇದ್ದುದ್ದರಿಂದ ಶಿರಗುಪ್ಪಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ತಿಳಿಸಿದರು.

ನಾಮಪತ್ರಗಳ ಪರಿಶೀಲನೆ ಕಾರ್ಯ ಮುಗಿದಿದ್ದು ನ.23ರವರೆಗೆ ನಾಮಪತ್ರಗಳ ಹಿಂದಕ್ಕೆ ಪಡೆಯುವುದಕ್ಕೆ ಅವಕಾಶ ಇದೆ.ನ.26ರಂದು ಫಲಿತಾಂಶ ಪ್ರಕಟಿಸಿ ಆಯ್ಕೆಯಾದವರಿಗೆ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.

ಕಣದಲ್ಲಿ ಶಾಂತಾ ಮದರಿ ಒಬ್ಬರೇ ಉಳಿದಿದ್ದು ಅವರ ಆಯ್ಕೆ ಆದಂತಾಗಿದೆ.ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಉಳಿದಿದೆ.
ಚುನಾವಣೆಗೆ ಸಹಾಯಕರಾಗಿ ಆಯ್.ಬಿ.ಹಿರೇಮಠ, ಪಿಡಿಒ ಪಿ.ಎಸ್.ನಾಯ್ಕೋಡಿ ಕಾರ್ಯನಿರ್ವಹಿಸಿದರು.ಪೊಲೀಸ್ ಇಲಾಖೆಯಿಂದ ಎಎಸ್ಐ ಎ.ಬಿ.ಟಕ್ಕಳಕಿ, ಶಾಂತಗೌಡ ಬನ್ನೆಟ್ಟಿ ಭದ್ರತೆ ಒದಗಿಸಿದ್ದರು.

ಹಿನ್ನಡೆ : ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯೊಳಗಡೆ ನಾಮಪತ್ರದೊಂದಿಗೆ ಲಗತ್ತಿಸಲು ವಿಫಲರಾಗಿದ್ದಕ್ಕೆ ಕವಿತಾ ಶಿರಗುಪ್ಪಿ ಅವರು ಚುನಾವಣಾ ಕಣದಿಂದ ಹಿನ್ನಡೆ ಅನುಭವಿಸಬೇಕಾಯಿತು.

ಹಾಲಿ,ಮಾಜಿ ಶಾಸಕರಿಂದಲೂ ಮಾಹಿತಿ :
ನಾಮಪತ್ರದೊಂದಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಸಮಯದಲ್ಲಿ ಉಂಟಾದ ಗೊಂದಲದ ಬಗ್ಗೆ ಹಾಲಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಚುನಾವಣಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ