Had ghar tiranga BJP supporters bike rally in mudhol

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ


ಮುಧೋಳ : 77 ನೇ ಸ್ವಾತಂತ್ರೋತ್ಸವದ ನಿಮಿತ್ಯ ಹರ್ ಘರ್ ತಿರಂಗಾ (Har ghar tiranga) ಕಾರ್ಯಕ್ರಮದ ಅಂಗವಾಗಿ ಬಿಜೆಪಿ‌ ಗ್ರಾಮೀಣ ಹಾಗೂ ನಗರ ಘಟಕದ‌ ವತಿಯಿಂದ ಬೈಕ್ ರ್ಯಾಲಿ ಜರುಗಿತು.

Join Our Telegram: https://t.me/dcgkannada

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರ್ಯಾಲಿ (Hat ghar tiranga) ಜಡಗಣ್ಣ ಬಾಲಣ್ಣ ವೃತ್ತ, ಬರಗಿ ಮಸೀದಿ, ಗಾಂಧಿ ಸರ್ಕಲ್, ಶಿವಾಜಿ ಸರ್ಕಲ್ ಮಾರ್ಗವಾಗಿ ರನ್ನ ಸರ್ಕಲ್ ಗೆ ಬಂದು ಸಮಾರೋಪಗೊಂಡಿತು.

ಬಿಜೆಪಿ ಮುಖಂಡರಾದ ಅರುಣ ಕಾರಜೋಳ, ಕೆ.ಆರ್. ಮಾಚಪ್ಪನವರ, ಬಿಜೆಪಿ‌ ಗ್ರಾಮೀಣ ಘಟಕ ಅಧ್ಯಕ್ಷ ಸಂಗಣ್ಣ ಕಾತರಕಿ, ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ, ಪ್ರಜ್ವಲ್ ಚಿಮ್ಮಡ, ಹನಮಂತ ತುಳಸಿಗೇರಿ, ರವಿ‌ ನಂದಾಗಾವ, ತುಷಾರ ಭೋಪಳೆ, ಅನುಪ್ ಚವ್ಹಾಣ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: Mudhol: ಬೆಳಂಬೆಳಗ್ಗೆ ಪೌರಕಾರ್ಮಿಕರಿಂದ ಹರ್ ಘರ್ ತಿರಂಗಾ ಮ್ಯಾರಾಥಾನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಭುವನೇಶ್ವರಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಶರಣಾಗಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ.

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ.

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ಮುದ್ದೇಬಿಹಾಳ : ಹಿಂದೆ ತೊಗರಿ ಬೆಳೆ ಹಾನಿಯಾಗಿದೆ ಎಂದು ರೈತರನ್ನು ಗುಂಪುಕಟ್ಟಿಕೊಂಡು ಪ್ರಚಾರದ ಗೀಳಿಗಾಗಿ ಹೋರಾಟ ನಡೆಸಿ ಸರ್ಕಾರ ಪರಿಹಾರ ಕೊಡದಿದ್ದರೆ ತಾವೇ ಪರಿಹಾರ ಕೊಡುವುದಾಗಿ ಹೇಳಿ ರೈತರನ್ನು ತಪ್ಪು ದಾರಿಗೆ ಎಳೆದಿದ್ದೀರಿ. ಇಂತಹ ಬಹಳ ಕೀಳು ಮಟ್ಟದ ರಾಜಕಾರಣ ಮಾಡಬೇಡಿ.ನಿಮಗೆ ಜನರು ಐದು ವರ್ಷ ವಿಶ್ರಾಂತಿ ನೀಡಿದ್ದಾರೆ. ಸುಮ್ಮನೆ ಮನೆಯಲ್ಲಿದ್ದು ರೆಸ್ಟ್ ಮಾಡಿ ಎಂದು ಶಾಸಕ ಸಿ. ಎಸ್. ನಾಡಗೌಡ ಅವರು ಮಾಜಿ ಶಾಸಕ ಎ. ಎಸ್. ಪಾಟೀಲ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಮುದ್ದೇಬಿಹಾಳ : ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಅವರ ಮನೆಗೆ ಬುಧವಾರ ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ ಮಾತನಾಡಿ, ಸರ್ಕಾರದಿಂದ ಮಾರ್ಗಸೂಚಿಯನ್ವಯ ಬರುವ ಪರಿಹಾರವನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ರೈತರು ಬೆಳೆನಷ್ಟ, ಹಾನಿಯ ಸಮಯದಲ್ಲಿ ಸಂಯಮ ಕಾಯ್ದುಕೊಂಡರೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗಲಿದೆ.