Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

ಮುಧೋಳ : ನೆರೆ ಸಂತ್ರಸ್ತರಗೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಸುರಿದ ಧಾರಾಕಾರ‌ ಮಳೆಗೂ ಜಗ್ಗದೆ ಹೋರಾಟಗಾರರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರೂ ಜಿಲ್ಲಾಢಳಿತ ಮಾತ್ರ ಹೋರಾಟಗಾರರ ಮನವೊಲಿಕೆಗೆ ಮುಂದಾಗಲಿಲ್ಲ.

ಬುಧವಾರ ಬೆಳಗ್ಗೆ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ ನೆರೆ ಸಂತ್ರಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ‌ ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ ವೃತ್ತದಿಂದ ಯಾದವಾಡ ರಸ್ತೆವರೆಗೆ ಚಕ್ಕಡಿ, ಟ್ರ್ಯಾಕ್ಟರ್ ಮೂಲಕ‌ ಪ್ರತಿಭಟನೆ ಮೆರವಣಿಗೆ ನಡೆಸಿದ ಹೋರಾಟಗಾರರು ಸಂಜೆ 6ಗಂಟೆವರೆಗೆ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೋರಾಟಗಾರರು, ಪ್ರತಿಬಾರಿ ಪ್ರವಾಹ ಉಂಟಾದಾಗ ನಾವು ನಿರಾಶ್ರಿತರಾಗುತ್ತಿದ್ದೇವೆ. ನಮಗೆ ಶಾಶ್ವತ ಸೂರು ಕಲ್ಪಿಸಬೇಕು, ಅವೈಜ್ಞಾನಿಕವಾಗಿ‌ ನಿರ್ಮಾಣಗೊಂಡಿರುವ ಬ್ಯಾರೇಜ್ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರೂ ಸರ್ಕಾರ ಕ್ರಮಕ್ಕೆ‌ ಮುಂದಾಗುತ್ತಿಲ್ಲ ಎಂದು ಆಕ್ರೋಶ‌ ಹೊರಹಾಕಿದರು.


ಪ್ರವಾಹದಲ್ಲಿ‌ ಹಾನಿಯಾಗಿರುವ ಪ್ರತಿ ಎಕರೆಗೂ ಒಂದು ಲಕ್ಷ ರೂ. ಪರಿಹಾರ ಒದಗಿಸಬೇಕು. ಮನೆಕಳೆದುಕೊಂಡವರಿಗೆ 5ಲಕ್ಷ ರೂ. ನೀಡಬೇಕು ಹಾಗೂ ಅವೈಜ್ಞಾನಿಕ ಬ್ಯಾರೇಜ್ ಗಳ ಪುನರ್ನಿಮಾಣಕ್ಕೆ‌ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಸ್ತೆ ಸಂಚಾರ ತಡೆದು ಹೋರಾಟ ಮಾಡುತ್ತಿರುವ ಸುದ್ದಿ ತಿಳಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸ್ಥಳಕ್ಕೆ‌ ಆಗಮಿಸಿ ಹೋರಾಟಗಾರರ ಮನವೊಲಿಕೆಗೆ ಮುಂದಾದರು.

ಈ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು‌ ಆಗಮಿಸಬೇಕು ನಮ್ಮ ಕಷ್ಟ ಆಲಿಸಬೇಕು ಎಂದು ಹೋರಾಟಗಾರರು‌ ಪಟ್ಟು‌ ಹಿಡಿದರು. ಉಪವಿಭಾಗಾಧಿಕಾರಿಗಳು ನಿಮ್ಮ ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಈಗ ಪ್ರತಿಭಟನೆಯನ್ನು ಹಿಂಪಡೆಯಿರಿ‌ ಎಂದು ಮಾಡಿಕೊಂಡ‌ ಮನವಿಗೆ ಜಗ್ಗದ ಪ್ರತಿಭನಾಕಾರರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಸಂಜೆ 4ಗಂಟೆ ಸುಮಾರಿಗೆ ಮುಧೋಳ ತಾಲೂಕಿನಾದ್ಯಂತ ಜೋರು ಮಳೆ‌ ಸುರಿಯಲಾರಂಭಿಸಿತು. ಮಳೆಯಿಂದ ಎದೆಗುಂದದ ಹೋರಾಟಗಾರರು ಮಳೆಯಲ್ಲಿಯೇ ರಸ್ತೆ ಮಧ್ಯ ನಿಂತು ಸರ್ಕಾರದ ವಿರುದ್ದ ಧಿಕ್ಕಾರ‌‌ ಕೂಗಿ ಆಕ್ರೋಶ ಹೊರಹಾಕಿದರು.

ನಿರಂತರ ಎರಡು ಗಂಟೆಗಳ‌ ಕಾಲ‌ ಮಳೆಯಲ್ಲಿ ನೆನೆದು ಹೋರಾಟ ನಡೆಸಿದರೂ ಸ್ಥಳಕ್ಕೆ ಆಗಮಿಸದ ಜಿಲ್ಲಾಡಳಿತದ ವಿರುದ್ದ ಬೇಸರ ವ್ಯಕ್ತಪಡಿಸಿದ ರೈತರು ತಮ್ಮ ಹೋರಾಟವನ್ನು ಅ.10ರವರೆಗೆ ತಾತ್ಕಾಲಿಕವಾಗಿ ಮುಂದೂಡಿದರು. ನೀಡಿರುವ ಗಡವಿನೊಳಗೆ ಸರ್ಕಾರ ನಮ್ಮೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳದೆ ಹೋದರೆ 10ರಂದು ಉಗ್ರ ಸ್ವರೂಪದ ಹೋರಾಟ ನಡೆಯಲಿದ್ದು ಮುಂದಾಗುವ ಅನಾಗಮಹುತಕ್ಕೆ ನಾವು ಹೊಣೆಗಾರರಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದರು.

ದುಂಡಪ್ಪ ಯರಗಟ್ಟಿ, ನಾಗೇಶ ಸೋರಗಾಂವಿ, ಬಂಡು ಘಾಟಗೆ, ಮುತ್ತಪ್ಪ ಕೋಮ್ಮಾರ, ನಾಗೇಶ ಗೋಲಶೇಟ್ಟಿ, ಬಸವಂತ ಕಾಂಬಳೆ, ದುಂಡಪ್ಪ ಲಿಂಗರಡ್ಡಿ, ಸದಪ್ಪ ತೇಲಿ, ಅನಂತರಾವ ಘೋರ್ಪಡೆ, ತಿಮ್ಮಣ್ಣ ನಾಯಕ, ಮಹೇಶ ಪಾಟೀಲ, ಕಲ್ಮೇಶ ಗೋಸಾರ, ರಾಜೇಂದ್ರ ಚಂದನಶಿವ, ಪರಶುರಾಮ ನಿಗಡೆ ಸೇರಿದಂತೆ ಇತರರು ಇದ್ದರು.


ಡಿವೈಎಸ್ಪಿ ಶಾಂತವೀರ ಈ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೂಕ್ತ ಬಂದೋಬಸ್ತ್ ಮಾಡಿದ್ದರು.


ಪಶು ಸಂಗೋಪಣೆ ಅಧಿಕಾರಿ ವಿರುದ್ದ ಆಕ್ರೋಶ : ಹೋರಾಟದಲ್ಲಿ‌ ರೈತರು ಚಕ್ಕಡಿಯೊಂದಿಗೆ ಭಾಗಿಯಾಗಿದ್ದರು. ರಸ್ತೆಯಲ್ಲಿ‌ ನಿಂತಿದ್ದ ಎತ್ತುಗಳಿಗೆ ಮೇವಿನ ವ್ಯವಸ್ಥೆ ಮಾಡದ ಪಶು‌ಸಂಗೋಪಣೆ‌ ಅಧಿಕಾರಿ ಗೋವಿಂದ ರಾಠೋಡ ವಿರುದ್ದ ಆಕ್ರೋಶ ಹೊರಹಾಕಿದ‌ ಪ್ರತಿಭಟನಾನಿರತರು ದಿಕ್ಕಾರ‌ ಕೂಗಿದರು. ಬಳಿಕ ನಗರಸಭೆಯಿಂದ ಎತ್ತುಗಳಿಗೆ ಟ್ಯಾಂಕರ್ ಮೂಲಕ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ