Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

ಮುಧೋಳ : ನೆರೆ ಸಂತ್ರಸ್ತರಗೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಸುರಿದ ಧಾರಾಕಾರ‌ ಮಳೆಗೂ ಜಗ್ಗದೆ ಹೋರಾಟಗಾರರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರೂ ಜಿಲ್ಲಾಢಳಿತ ಮಾತ್ರ ಹೋರಾಟಗಾರರ ಮನವೊಲಿಕೆಗೆ ಮುಂದಾಗಲಿಲ್ಲ.

ಬುಧವಾರ ಬೆಳಗ್ಗೆ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ ನೆರೆ ಸಂತ್ರಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ‌ ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ ವೃತ್ತದಿಂದ ಯಾದವಾಡ ರಸ್ತೆವರೆಗೆ ಚಕ್ಕಡಿ, ಟ್ರ್ಯಾಕ್ಟರ್ ಮೂಲಕ‌ ಪ್ರತಿಭಟನೆ ಮೆರವಣಿಗೆ ನಡೆಸಿದ ಹೋರಾಟಗಾರರು ಸಂಜೆ 6ಗಂಟೆವರೆಗೆ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೋರಾಟಗಾರರು, ಪ್ರತಿಬಾರಿ ಪ್ರವಾಹ ಉಂಟಾದಾಗ ನಾವು ನಿರಾಶ್ರಿತರಾಗುತ್ತಿದ್ದೇವೆ. ನಮಗೆ ಶಾಶ್ವತ ಸೂರು ಕಲ್ಪಿಸಬೇಕು, ಅವೈಜ್ಞಾನಿಕವಾಗಿ‌ ನಿರ್ಮಾಣಗೊಂಡಿರುವ ಬ್ಯಾರೇಜ್ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರೂ ಸರ್ಕಾರ ಕ್ರಮಕ್ಕೆ‌ ಮುಂದಾಗುತ್ತಿಲ್ಲ ಎಂದು ಆಕ್ರೋಶ‌ ಹೊರಹಾಕಿದರು.


ಪ್ರವಾಹದಲ್ಲಿ‌ ಹಾನಿಯಾಗಿರುವ ಪ್ರತಿ ಎಕರೆಗೂ ಒಂದು ಲಕ್ಷ ರೂ. ಪರಿಹಾರ ಒದಗಿಸಬೇಕು. ಮನೆಕಳೆದುಕೊಂಡವರಿಗೆ 5ಲಕ್ಷ ರೂ. ನೀಡಬೇಕು ಹಾಗೂ ಅವೈಜ್ಞಾನಿಕ ಬ್ಯಾರೇಜ್ ಗಳ ಪುನರ್ನಿಮಾಣಕ್ಕೆ‌ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಸ್ತೆ ಸಂಚಾರ ತಡೆದು ಹೋರಾಟ ಮಾಡುತ್ತಿರುವ ಸುದ್ದಿ ತಿಳಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸ್ಥಳಕ್ಕೆ‌ ಆಗಮಿಸಿ ಹೋರಾಟಗಾರರ ಮನವೊಲಿಕೆಗೆ ಮುಂದಾದರು.

ಈ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು‌ ಆಗಮಿಸಬೇಕು ನಮ್ಮ ಕಷ್ಟ ಆಲಿಸಬೇಕು ಎಂದು ಹೋರಾಟಗಾರರು‌ ಪಟ್ಟು‌ ಹಿಡಿದರು. ಉಪವಿಭಾಗಾಧಿಕಾರಿಗಳು ನಿಮ್ಮ ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಈಗ ಪ್ರತಿಭಟನೆಯನ್ನು ಹಿಂಪಡೆಯಿರಿ‌ ಎಂದು ಮಾಡಿಕೊಂಡ‌ ಮನವಿಗೆ ಜಗ್ಗದ ಪ್ರತಿಭನಾಕಾರರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಸಂಜೆ 4ಗಂಟೆ ಸುಮಾರಿಗೆ ಮುಧೋಳ ತಾಲೂಕಿನಾದ್ಯಂತ ಜೋರು ಮಳೆ‌ ಸುರಿಯಲಾರಂಭಿಸಿತು. ಮಳೆಯಿಂದ ಎದೆಗುಂದದ ಹೋರಾಟಗಾರರು ಮಳೆಯಲ್ಲಿಯೇ ರಸ್ತೆ ಮಧ್ಯ ನಿಂತು ಸರ್ಕಾರದ ವಿರುದ್ದ ಧಿಕ್ಕಾರ‌‌ ಕೂಗಿ ಆಕ್ರೋಶ ಹೊರಹಾಕಿದರು.

ನಿರಂತರ ಎರಡು ಗಂಟೆಗಳ‌ ಕಾಲ‌ ಮಳೆಯಲ್ಲಿ ನೆನೆದು ಹೋರಾಟ ನಡೆಸಿದರೂ ಸ್ಥಳಕ್ಕೆ ಆಗಮಿಸದ ಜಿಲ್ಲಾಡಳಿತದ ವಿರುದ್ದ ಬೇಸರ ವ್ಯಕ್ತಪಡಿಸಿದ ರೈತರು ತಮ್ಮ ಹೋರಾಟವನ್ನು ಅ.10ರವರೆಗೆ ತಾತ್ಕಾಲಿಕವಾಗಿ ಮುಂದೂಡಿದರು. ನೀಡಿರುವ ಗಡವಿನೊಳಗೆ ಸರ್ಕಾರ ನಮ್ಮೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳದೆ ಹೋದರೆ 10ರಂದು ಉಗ್ರ ಸ್ವರೂಪದ ಹೋರಾಟ ನಡೆಯಲಿದ್ದು ಮುಂದಾಗುವ ಅನಾಗಮಹುತಕ್ಕೆ ನಾವು ಹೊಣೆಗಾರರಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದರು.

ದುಂಡಪ್ಪ ಯರಗಟ್ಟಿ, ನಾಗೇಶ ಸೋರಗಾಂವಿ, ಬಂಡು ಘಾಟಗೆ, ಮುತ್ತಪ್ಪ ಕೋಮ್ಮಾರ, ನಾಗೇಶ ಗೋಲಶೇಟ್ಟಿ, ಬಸವಂತ ಕಾಂಬಳೆ, ದುಂಡಪ್ಪ ಲಿಂಗರಡ್ಡಿ, ಸದಪ್ಪ ತೇಲಿ, ಅನಂತರಾವ ಘೋರ್ಪಡೆ, ತಿಮ್ಮಣ್ಣ ನಾಯಕ, ಮಹೇಶ ಪಾಟೀಲ, ಕಲ್ಮೇಶ ಗೋಸಾರ, ರಾಜೇಂದ್ರ ಚಂದನಶಿವ, ಪರಶುರಾಮ ನಿಗಡೆ ಸೇರಿದಂತೆ ಇತರರು ಇದ್ದರು.


ಡಿವೈಎಸ್ಪಿ ಶಾಂತವೀರ ಈ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೂಕ್ತ ಬಂದೋಬಸ್ತ್ ಮಾಡಿದ್ದರು.


ಪಶು ಸಂಗೋಪಣೆ ಅಧಿಕಾರಿ ವಿರುದ್ದ ಆಕ್ರೋಶ : ಹೋರಾಟದಲ್ಲಿ‌ ರೈತರು ಚಕ್ಕಡಿಯೊಂದಿಗೆ ಭಾಗಿಯಾಗಿದ್ದರು. ರಸ್ತೆಯಲ್ಲಿ‌ ನಿಂತಿದ್ದ ಎತ್ತುಗಳಿಗೆ ಮೇವಿನ ವ್ಯವಸ್ಥೆ ಮಾಡದ ಪಶು‌ಸಂಗೋಪಣೆ‌ ಅಧಿಕಾರಿ ಗೋವಿಂದ ರಾಠೋಡ ವಿರುದ್ದ ಆಕ್ರೋಶ ಹೊರಹಾಕಿದ‌ ಪ್ರತಿಭಟನಾನಿರತರು ದಿಕ್ಕಾರ‌ ಕೂಗಿದರು. ಬಳಿಕ ನಗರಸಭೆಯಿಂದ ಎತ್ತುಗಳಿಗೆ ಟ್ಯಾಂಕರ್ ಮೂಲಕ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ