Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

ಮುಧೋಳ : ನೆರೆ ಸಂತ್ರಸ್ತರಗೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಸುರಿದ ಧಾರಾಕಾರ‌ ಮಳೆಗೂ ಜಗ್ಗದೆ ಹೋರಾಟಗಾರರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರೂ ಜಿಲ್ಲಾಢಳಿತ ಮಾತ್ರ ಹೋರಾಟಗಾರರ ಮನವೊಲಿಕೆಗೆ ಮುಂದಾಗಲಿಲ್ಲ.

ಬುಧವಾರ ಬೆಳಗ್ಗೆ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ ನೆರೆ ಸಂತ್ರಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ‌ ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ ವೃತ್ತದಿಂದ ಯಾದವಾಡ ರಸ್ತೆವರೆಗೆ ಚಕ್ಕಡಿ, ಟ್ರ್ಯಾಕ್ಟರ್ ಮೂಲಕ‌ ಪ್ರತಿಭಟನೆ ಮೆರವಣಿಗೆ ನಡೆಸಿದ ಹೋರಾಟಗಾರರು ಸಂಜೆ 6ಗಂಟೆವರೆಗೆ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೋರಾಟಗಾರರು, ಪ್ರತಿಬಾರಿ ಪ್ರವಾಹ ಉಂಟಾದಾಗ ನಾವು ನಿರಾಶ್ರಿತರಾಗುತ್ತಿದ್ದೇವೆ. ನಮಗೆ ಶಾಶ್ವತ ಸೂರು ಕಲ್ಪಿಸಬೇಕು, ಅವೈಜ್ಞಾನಿಕವಾಗಿ‌ ನಿರ್ಮಾಣಗೊಂಡಿರುವ ಬ್ಯಾರೇಜ್ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರೂ ಸರ್ಕಾರ ಕ್ರಮಕ್ಕೆ‌ ಮುಂದಾಗುತ್ತಿಲ್ಲ ಎಂದು ಆಕ್ರೋಶ‌ ಹೊರಹಾಕಿದರು.


ಪ್ರವಾಹದಲ್ಲಿ‌ ಹಾನಿಯಾಗಿರುವ ಪ್ರತಿ ಎಕರೆಗೂ ಒಂದು ಲಕ್ಷ ರೂ. ಪರಿಹಾರ ಒದಗಿಸಬೇಕು. ಮನೆಕಳೆದುಕೊಂಡವರಿಗೆ 5ಲಕ್ಷ ರೂ. ನೀಡಬೇಕು ಹಾಗೂ ಅವೈಜ್ಞಾನಿಕ ಬ್ಯಾರೇಜ್ ಗಳ ಪುನರ್ನಿಮಾಣಕ್ಕೆ‌ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಸ್ತೆ ಸಂಚಾರ ತಡೆದು ಹೋರಾಟ ಮಾಡುತ್ತಿರುವ ಸುದ್ದಿ ತಿಳಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸ್ಥಳಕ್ಕೆ‌ ಆಗಮಿಸಿ ಹೋರಾಟಗಾರರ ಮನವೊಲಿಕೆಗೆ ಮುಂದಾದರು.

ಈ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು‌ ಆಗಮಿಸಬೇಕು ನಮ್ಮ ಕಷ್ಟ ಆಲಿಸಬೇಕು ಎಂದು ಹೋರಾಟಗಾರರು‌ ಪಟ್ಟು‌ ಹಿಡಿದರು. ಉಪವಿಭಾಗಾಧಿಕಾರಿಗಳು ನಿಮ್ಮ ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಈಗ ಪ್ರತಿಭಟನೆಯನ್ನು ಹಿಂಪಡೆಯಿರಿ‌ ಎಂದು ಮಾಡಿಕೊಂಡ‌ ಮನವಿಗೆ ಜಗ್ಗದ ಪ್ರತಿಭನಾಕಾರರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಸಂಜೆ 4ಗಂಟೆ ಸುಮಾರಿಗೆ ಮುಧೋಳ ತಾಲೂಕಿನಾದ್ಯಂತ ಜೋರು ಮಳೆ‌ ಸುರಿಯಲಾರಂಭಿಸಿತು. ಮಳೆಯಿಂದ ಎದೆಗುಂದದ ಹೋರಾಟಗಾರರು ಮಳೆಯಲ್ಲಿಯೇ ರಸ್ತೆ ಮಧ್ಯ ನಿಂತು ಸರ್ಕಾರದ ವಿರುದ್ದ ಧಿಕ್ಕಾರ‌‌ ಕೂಗಿ ಆಕ್ರೋಶ ಹೊರಹಾಕಿದರು.

ನಿರಂತರ ಎರಡು ಗಂಟೆಗಳ‌ ಕಾಲ‌ ಮಳೆಯಲ್ಲಿ ನೆನೆದು ಹೋರಾಟ ನಡೆಸಿದರೂ ಸ್ಥಳಕ್ಕೆ ಆಗಮಿಸದ ಜಿಲ್ಲಾಡಳಿತದ ವಿರುದ್ದ ಬೇಸರ ವ್ಯಕ್ತಪಡಿಸಿದ ರೈತರು ತಮ್ಮ ಹೋರಾಟವನ್ನು ಅ.10ರವರೆಗೆ ತಾತ್ಕಾಲಿಕವಾಗಿ ಮುಂದೂಡಿದರು. ನೀಡಿರುವ ಗಡವಿನೊಳಗೆ ಸರ್ಕಾರ ನಮ್ಮೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳದೆ ಹೋದರೆ 10ರಂದು ಉಗ್ರ ಸ್ವರೂಪದ ಹೋರಾಟ ನಡೆಯಲಿದ್ದು ಮುಂದಾಗುವ ಅನಾಗಮಹುತಕ್ಕೆ ನಾವು ಹೊಣೆಗಾರರಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದರು.

ದುಂಡಪ್ಪ ಯರಗಟ್ಟಿ, ನಾಗೇಶ ಸೋರಗಾಂವಿ, ಬಂಡು ಘಾಟಗೆ, ಮುತ್ತಪ್ಪ ಕೋಮ್ಮಾರ, ನಾಗೇಶ ಗೋಲಶೇಟ್ಟಿ, ಬಸವಂತ ಕಾಂಬಳೆ, ದುಂಡಪ್ಪ ಲಿಂಗರಡ್ಡಿ, ಸದಪ್ಪ ತೇಲಿ, ಅನಂತರಾವ ಘೋರ್ಪಡೆ, ತಿಮ್ಮಣ್ಣ ನಾಯಕ, ಮಹೇಶ ಪಾಟೀಲ, ಕಲ್ಮೇಶ ಗೋಸಾರ, ರಾಜೇಂದ್ರ ಚಂದನಶಿವ, ಪರಶುರಾಮ ನಿಗಡೆ ಸೇರಿದಂತೆ ಇತರರು ಇದ್ದರು.


ಡಿವೈಎಸ್ಪಿ ಶಾಂತವೀರ ಈ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೂಕ್ತ ಬಂದೋಬಸ್ತ್ ಮಾಡಿದ್ದರು.


ಪಶು ಸಂಗೋಪಣೆ ಅಧಿಕಾರಿ ವಿರುದ್ದ ಆಕ್ರೋಶ : ಹೋರಾಟದಲ್ಲಿ‌ ರೈತರು ಚಕ್ಕಡಿಯೊಂದಿಗೆ ಭಾಗಿಯಾಗಿದ್ದರು. ರಸ್ತೆಯಲ್ಲಿ‌ ನಿಂತಿದ್ದ ಎತ್ತುಗಳಿಗೆ ಮೇವಿನ ವ್ಯವಸ್ಥೆ ಮಾಡದ ಪಶು‌ಸಂಗೋಪಣೆ‌ ಅಧಿಕಾರಿ ಗೋವಿಂದ ರಾಠೋಡ ವಿರುದ್ದ ಆಕ್ರೋಶ ಹೊರಹಾಕಿದ‌ ಪ್ರತಿಭಟನಾನಿರತರು ದಿಕ್ಕಾರ‌ ಕೂಗಿದರು. ಬಳಿಕ ನಗರಸಭೆಯಿಂದ ಎತ್ತುಗಳಿಗೆ ಟ್ಯಾಂಕರ್ ಮೂಲಕ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು