Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ

ಮುಧೋಳ : ನೆರೆ ಸಂತ್ರಸ್ತರಗೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಸುರಿದ ಧಾರಾಕಾರ‌ ಮಳೆಗೂ ಜಗ್ಗದೆ ಹೋರಾಟಗಾರರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರೂ ಜಿಲ್ಲಾಢಳಿತ ಮಾತ್ರ ಹೋರಾಟಗಾರರ ಮನವೊಲಿಕೆಗೆ ಮುಂದಾಗಲಿಲ್ಲ.

ಬುಧವಾರ ಬೆಳಗ್ಗೆ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ ನೆರೆ ಸಂತ್ರಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ‌ ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ ವೃತ್ತದಿಂದ ಯಾದವಾಡ ರಸ್ತೆವರೆಗೆ ಚಕ್ಕಡಿ, ಟ್ರ್ಯಾಕ್ಟರ್ ಮೂಲಕ‌ ಪ್ರತಿಭಟನೆ ಮೆರವಣಿಗೆ ನಡೆಸಿದ ಹೋರಾಟಗಾರರು ಸಂಜೆ 6ಗಂಟೆವರೆಗೆ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಹೋರಾಟಗಾರರು, ಪ್ರತಿಬಾರಿ ಪ್ರವಾಹ ಉಂಟಾದಾಗ ನಾವು ನಿರಾಶ್ರಿತರಾಗುತ್ತಿದ್ದೇವೆ. ನಮಗೆ ಶಾಶ್ವತ ಸೂರು ಕಲ್ಪಿಸಬೇಕು, ಅವೈಜ್ಞಾನಿಕವಾಗಿ‌ ನಿರ್ಮಾಣಗೊಂಡಿರುವ ಬ್ಯಾರೇಜ್ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರೂ ಸರ್ಕಾರ ಕ್ರಮಕ್ಕೆ‌ ಮುಂದಾಗುತ್ತಿಲ್ಲ ಎಂದು ಆಕ್ರೋಶ‌ ಹೊರಹಾಕಿದರು.


ಪ್ರವಾಹದಲ್ಲಿ‌ ಹಾನಿಯಾಗಿರುವ ಪ್ರತಿ ಎಕರೆಗೂ ಒಂದು ಲಕ್ಷ ರೂ. ಪರಿಹಾರ ಒದಗಿಸಬೇಕು. ಮನೆಕಳೆದುಕೊಂಡವರಿಗೆ 5ಲಕ್ಷ ರೂ. ನೀಡಬೇಕು ಹಾಗೂ ಅವೈಜ್ಞಾನಿಕ ಬ್ಯಾರೇಜ್ ಗಳ ಪುನರ್ನಿಮಾಣಕ್ಕೆ‌ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಸ್ತೆ ಸಂಚಾರ ತಡೆದು ಹೋರಾಟ ಮಾಡುತ್ತಿರುವ ಸುದ್ದಿ ತಿಳಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸ್ಥಳಕ್ಕೆ‌ ಆಗಮಿಸಿ ಹೋರಾಟಗಾರರ ಮನವೊಲಿಕೆಗೆ ಮುಂದಾದರು.

ಈ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು‌ ಆಗಮಿಸಬೇಕು ನಮ್ಮ ಕಷ್ಟ ಆಲಿಸಬೇಕು ಎಂದು ಹೋರಾಟಗಾರರು‌ ಪಟ್ಟು‌ ಹಿಡಿದರು. ಉಪವಿಭಾಗಾಧಿಕಾರಿಗಳು ನಿಮ್ಮ ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಈಗ ಪ್ರತಿಭಟನೆಯನ್ನು ಹಿಂಪಡೆಯಿರಿ‌ ಎಂದು ಮಾಡಿಕೊಂಡ‌ ಮನವಿಗೆ ಜಗ್ಗದ ಪ್ರತಿಭನಾಕಾರರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಸಂಜೆ 4ಗಂಟೆ ಸುಮಾರಿಗೆ ಮುಧೋಳ ತಾಲೂಕಿನಾದ್ಯಂತ ಜೋರು ಮಳೆ‌ ಸುರಿಯಲಾರಂಭಿಸಿತು. ಮಳೆಯಿಂದ ಎದೆಗುಂದದ ಹೋರಾಟಗಾರರು ಮಳೆಯಲ್ಲಿಯೇ ರಸ್ತೆ ಮಧ್ಯ ನಿಂತು ಸರ್ಕಾರದ ವಿರುದ್ದ ಧಿಕ್ಕಾರ‌‌ ಕೂಗಿ ಆಕ್ರೋಶ ಹೊರಹಾಕಿದರು.

ನಿರಂತರ ಎರಡು ಗಂಟೆಗಳ‌ ಕಾಲ‌ ಮಳೆಯಲ್ಲಿ ನೆನೆದು ಹೋರಾಟ ನಡೆಸಿದರೂ ಸ್ಥಳಕ್ಕೆ ಆಗಮಿಸದ ಜಿಲ್ಲಾಡಳಿತದ ವಿರುದ್ದ ಬೇಸರ ವ್ಯಕ್ತಪಡಿಸಿದ ರೈತರು ತಮ್ಮ ಹೋರಾಟವನ್ನು ಅ.10ರವರೆಗೆ ತಾತ್ಕಾಲಿಕವಾಗಿ ಮುಂದೂಡಿದರು. ನೀಡಿರುವ ಗಡವಿನೊಳಗೆ ಸರ್ಕಾರ ನಮ್ಮೊಂದಿಗೆ ಚರ್ಚಿಸಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳದೆ ಹೋದರೆ 10ರಂದು ಉಗ್ರ ಸ್ವರೂಪದ ಹೋರಾಟ ನಡೆಯಲಿದ್ದು ಮುಂದಾಗುವ ಅನಾಗಮಹುತಕ್ಕೆ ನಾವು ಹೊಣೆಗಾರರಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದರು.

ದುಂಡಪ್ಪ ಯರಗಟ್ಟಿ, ನಾಗೇಶ ಸೋರಗಾಂವಿ, ಬಂಡು ಘಾಟಗೆ, ಮುತ್ತಪ್ಪ ಕೋಮ್ಮಾರ, ನಾಗೇಶ ಗೋಲಶೇಟ್ಟಿ, ಬಸವಂತ ಕಾಂಬಳೆ, ದುಂಡಪ್ಪ ಲಿಂಗರಡ್ಡಿ, ಸದಪ್ಪ ತೇಲಿ, ಅನಂತರಾವ ಘೋರ್ಪಡೆ, ತಿಮ್ಮಣ್ಣ ನಾಯಕ, ಮಹೇಶ ಪಾಟೀಲ, ಕಲ್ಮೇಶ ಗೋಸಾರ, ರಾಜೇಂದ್ರ ಚಂದನಶಿವ, ಪರಶುರಾಮ ನಿಗಡೆ ಸೇರಿದಂತೆ ಇತರರು ಇದ್ದರು.


ಡಿವೈಎಸ್ಪಿ ಶಾಂತವೀರ ಈ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೂಕ್ತ ಬಂದೋಬಸ್ತ್ ಮಾಡಿದ್ದರು.


ಪಶು ಸಂಗೋಪಣೆ ಅಧಿಕಾರಿ ವಿರುದ್ದ ಆಕ್ರೋಶ : ಹೋರಾಟದಲ್ಲಿ‌ ರೈತರು ಚಕ್ಕಡಿಯೊಂದಿಗೆ ಭಾಗಿಯಾಗಿದ್ದರು. ರಸ್ತೆಯಲ್ಲಿ‌ ನಿಂತಿದ್ದ ಎತ್ತುಗಳಿಗೆ ಮೇವಿನ ವ್ಯವಸ್ಥೆ ಮಾಡದ ಪಶು‌ಸಂಗೋಪಣೆ‌ ಅಧಿಕಾರಿ ಗೋವಿಂದ ರಾಠೋಡ ವಿರುದ್ದ ಆಕ್ರೋಶ ಹೊರಹಾಕಿದ‌ ಪ್ರತಿಭಟನಾನಿರತರು ದಿಕ್ಕಾರ‌ ಕೂಗಿದರು. ಬಳಿಕ ನಗರಸಭೆಯಿಂದ ಎತ್ತುಗಳಿಗೆ ಟ್ಯಾಂಕರ್ ಮೂಲಕ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ