Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ