Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ