Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ರಾಜ್ಯದ 30 ಸಾವಿರ ಗುತ್ತಿಗೆದಾರರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಇನ್ನೀತರ

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಮುದ್ದೇಬಿಹಾಳ ಪಟ್ಟಣದ ಶಾಂತಲಾ ಪ್ರೌಢಶಾಲೆಯ ವಿದ್ಯಾರ್ಥಿ, ತಾಲ್ಲೂಕಿನ ಗೋನಾಳ ಪಿ.ಎನ್. ಗ್ರಾಮದ ನಿವಾಸಿ ಮಹೇಶ ಬಸಪ್ಪ ಮಾದರ(16)ಎಂದು ಗುರುತಿಸಲಾಗಿದೆ.