Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು ನಡೆಯಲಿದ್ದು ಇದರಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಮಾ.12 ರಂದು ಬೆಳಗ್ಗೆ ಮಂಗಲವಾದ್ಯ ಘೋಷಣೆ,8ಕ್ಕೆ ಪದ್ಮಾವತಿ ದೇವಿಯ ಕಳಸ,ಪಲ್ಲಕ್ಕಿ,ರಥದ ಹಗ್ಗದ ಮೆರವಣಿಗೆ,ಪಂಚಾಮೃತ ಅಭಿಷೇಕ ಪೂಜೆ ನಡೆಯಲಿದೆ. ಮದ್ಯಾಹ್ನ 12ಕ್ಕೆ ಚಡಾವು ಸವಾಲು.ಮದ್ಯಾಹ್ನ 1ಕ್ಕೆ ಉತ್ಸವ ಮೂರ್ತಿಗಳ ರಥಾರೋಹಣ ನಂತರ ಅನ್ನಸಂತರ್ಪಣೆ ನಡೆಯಲಿದೆ.ಮದ್ಯಾಹ್ನ 2ಕ್ಕೆ ಧರ್ಮಸಭೆ ಮತ್ತು ಸಾಧಕರ ಸನ್ಮಾನ ಜರುಗಲಿದೆ. ಸಭೆಯ ಅಧ್ಯಕ್ಷತೆಯನ್ನು ಪದ್ಮಾವತಿ ಟ್ರಸ್ಟ್ ಕಮಿಟಿ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ,ಇಂಡಿ,ಸಿOದಗಿ,ಮುದ್ದೇಬಿಹಾಳ, ತಾಳಿಕೋಟಿ,ಬ.ಬಾಗೇವಾಡಿಯಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.ವಿಜಯಪುರದಿAದ 970 ರೂ., ಇಂಡಿಯಿAದ 950 ರೂ., ಸಿಂದಗಿಯಿOದ 875 ರೂ.,ಮುದ್ದೇಬಿಹಾಳದಿಂದ 830 ರೂ., ತಾಳಿಕೋಟೆಯಿಂದ 825 ರೂ., ಬ.ಬಾಗೇವಾಡಿಯಿಂದ 890 ರೂ.