Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್ (24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆಗೈದಿದ್ದಾನೆ.(Murder case)

ಬಳಿಕ ಮನೆಗೆ ತೆರಳಿ ತಾಯಿಯ ಜತೆ ಚಿಕ್ಕಬಿದರಕಲ್ಲಿನಲ್ಲಿರುವ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು.

ಸ್ವಚ್ಛತೆ ವಿಷಯದಲ್ಲಿ ಬಾಡಿಗೆ ಮನೆಯವರ ಜತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ