Murder Case Image of murder symbol

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿ ಹತ್ಯೆಯಾಗಿರುವ (Murder Case) ಘಟನೆ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ವರದಿಯಾಗಿದೆ.

ಹತ್ಯೆಯಾದ ಮಹಿಳೆಯನ್ನು 32 ವರ್ಷದ ದಿವ್ಯಾ ಎಂದು ಗುರುತಿಸಲಾಗಿದೆ. ಹತ್ಯೆ ಆರೋಪಿ ಪತಿಯನ್ನು ಉಮೇಶ್ ಎನ್ನಲಾಗಿದೆ.

Join Our Telegram: https://t.me/dcgkannada

ಮದುವೆಯಾಗಿ ಕೆಲವು ವರ್ಷಗಳು ಜೀವನ ನಡೆಸಿದ ಇಬ್ಬರ ನಡುವೆ ಇತ್ತೀಚೆಗೆ ಮನಸ್ತಾಪ ಉಂಟಾಗಿದೆ. ಇದರಿಂದ ನನಗೆ ಡಿವೋರ್ಸ್ ಕೊಟ್ಟುಬಿಡಿ ನಾನು ಬೇರೆ ಜೀವನ ಕಟ್ಟಿಕೊಳ್ಳುತ್ತೇನೆ ಎಂದು ದಿವ್ಯಾ ಕೇಳಿದ್ದಾಳೆ. ಆಗ ಉಮೇಶ್ ಹೆಂಡತಿಯನ್ನು ಸಮಾಧಾನಪಡಿಸಿ ಬುದ್ದಿ ಹೇಳಿದ್ದ ಆದರೆ, ಇದ್ಯಾವುದನ್ನೂ ಕೇಳದ ದಿವ್ಯಾಳಿಗೆ ಉಮೇಶ್ ಡಿವೋರ್ಸ್ ಕೊಡುವುದಾಗಿ ಹೇಳಿದ್ದಾನೆ.

ಡಿವೋರ್ಸ್ ಕೇಸ್ (Divorce Case) ಸಂಬಂಧಿಸಿದಂತೆ ಮಂಗಳವಾರ ಮಾಗಡಿ ಕೋರ್ಟ್‌ಗೆ ದಂಪತಿ ಹಾಜರಾಗಿ ವಿಚಾರಣೆಯನ್ನು ಎದುರಿಸಿದ್ದರಂತೆ. ಇನ್ನು ಹೆಂಡತಿಗೆ ಒಲ್ಲದ ಮನಸ್ಸಿನಿಂದ ಡಿವೋರ್ಸ್ ಕೊಡಲು ಮುಂದಾಗಿದ್ದನಂತೆ ಉಮೇಶ್.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ನ್ಯಾಯಾಲಯದಿಂದ ಮನೆಗೆ ವಾಪಸ್ ಹೋಗುವ ಮೊದಲು ದೇವಸ್ಥಾನಕ್ಕೆ ಹೋಗಿ ಬರೋಣ ಎಂದು ಹೇಳಿ ಹೆಂಡತಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದಾನೆ. ದೇವಸ್ಥಾನದಲ್ಲಿ ದಿವ್ಯಾ ಪೂಜೆ ಮಾಡುತ್ತಿರುವಾಗಲೇ ಆಕೆಯನ್ನು ಹತ್ಯೆ (Murder Case) ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಅಲ್ಲಿಂದ ಮೃತದೇಹವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾನೆ ಎ‌ನ್ನಲಾಗಿದೆ.

ಇನ್ನು ಅರಣ್ಯದಲ್ಲಿ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಜಾಡು ಹಿಡಿದು ಹೊರಟ ಪೊಲೀಸರು ಶವದ ಗುರುತು ಪತ್ತೆ ಮಾಡಿದ್ದಾರೆ. ನಂತರ, ಆಕೆಯ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

Latest News

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ.

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ

ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ.

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ಮುದ್ದೇಬಿಹಾಳ : ಹಿಂದೆ ತೊಗರಿ ಬೆಳೆ ಹಾನಿಯಾಗಿದೆ ಎಂದು ರೈತರನ್ನು ಗುಂಪುಕಟ್ಟಿಕೊಂಡು ಪ್ರಚಾರದ ಗೀಳಿಗಾಗಿ ಹೋರಾಟ ನಡೆಸಿ ಸರ್ಕಾರ ಪರಿಹಾರ ಕೊಡದಿದ್ದರೆ ತಾವೇ ಪರಿಹಾರ ಕೊಡುವುದಾಗಿ ಹೇಳಿ ರೈತರನ್ನು ತಪ್ಪು ದಾರಿಗೆ ಎಳೆದಿದ್ದೀರಿ. ಇಂತಹ ಬಹಳ ಕೀಳು ಮಟ್ಟದ ರಾಜಕಾರಣ ಮಾಡಬೇಡಿ.ನಿಮಗೆ ಜನರು ಐದು ವರ್ಷ ವಿಶ್ರಾಂತಿ ನೀಡಿದ್ದಾರೆ. ಸುಮ್ಮನೆ ಮನೆಯಲ್ಲಿದ್ದು ರೆಸ್ಟ್ ಮಾಡಿ ಎಂದು ಶಾಸಕ ಸಿ. ಎಸ್. ನಾಡಗೌಡ ಅವರು ಮಾಜಿ ಶಾಸಕ ಎ. ಎಸ್. ಪಾಟೀಲ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಮುದ್ದೇಬಿಹಾಳ : ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಅವರ ಮನೆಗೆ ಬುಧವಾರ ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ ಮಾತನಾಡಿ, ಸರ್ಕಾರದಿಂದ ಮಾರ್ಗಸೂಚಿಯನ್ವಯ ಬರುವ ಪರಿಹಾರವನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ರೈತರು ಬೆಳೆನಷ್ಟ, ಹಾನಿಯ ಸಮಯದಲ್ಲಿ ಸಂಯಮ ಕಾಯ್ದುಕೊಂಡರೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗಲಿದೆ.