Murder case: The wife who killed her husband along with her lover and made up an accident story

Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

ಗದಗ : ಮಾಜಿ ಪ್ರಿಯಕರನ ಜೊತೆ ಸೇರಿ ಪತಿಗೆ ಚಿಕನ್ ಮಸಾಲ ತಿನ್ನಿಸಿ ಕೊಲೆ ಮಾಡಿ (Murder case) ಅಪಘಾತದ ಕಥೆ ಕಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಈ ಪ್ರಕರಣವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಜುನಾಥ್ ಮೀಸಿ ಎಂಬಾತ ಕಳೆದ ಕೆಲ ದಿನಗಳ ಹಿಂದೆ ಗದಗ ಹೆದ್ದಾರಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಈ ವೇಳೆ ತನಿಖೆ ಆರಂಭಿಸಿದ ಗದಗ ಗ್ರಾಮೀಣ ಪೊಲೀಸರು ಮೃತನ ಪತ್ನಿ ಶಿವಮ್ಮನನ್ನು ವಿಚಾರಣೆ ವೇಳೆ ರಾತ್ರಿ ಮನೆಯಿಂದ ಹೋದವರು ಅಪಘಾತಗೊಂಡು ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿದ್ದಳು.

ಆದರೆ, ಇದ್ಯಾವುದನ್ನೂ ನಂಬದ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸುತ್ತಾರೆ. ಈ ವೇಳೆ ಖಾಕಿ ಪಡೆ ಶ್ವಾನ ನೇರವಾಗಿ ಮೃತನ ಪತ್ನಿಯ ಮನೆಗೆ ಕರೆದುಕೊಂಡು ಬಂದಿದೆ. ಬಳಿಕ ವಿಚಾರಣೆ ನಡೆಸಿದಾಗ ಒಂದೊಂದಾಗಿ ವಿಷಯ ಬಿಚ್ಚಿದ್ದಾಳೆ.

ಪತ್ನಿ ಶಿವಮ್ಮ ಮಂಜುನಾಥ್ ಯಲಬುರ್ಗಾ ಎಂತಾತನೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಆದರೆ, ಅವರಿಬ್ಬರ ಮಾತುಕತೆಗೆ ಮೃತ ಮಂಜುನಾಥ್ ಅಡ್ಡಿಯಾಗುತ್ತಿದ್ದ. ಈ ಕಾರಣಕ್ಕೆ ಮಾಜಿ ಪ್ರೀಯತಮನ ಜೊತೆ ಸೇರಿ ಪಕ್ಕಾ ಪ್ಲಾನ್ ಮಾಡಿ ಪತಿಗೆ ಚಿಕನ್ ಮಸಾಲ ತಿನ್ನಿಸಿ ಬಳಿಕ ಹರಿತವಾದ ಆಯುಧದಿಂದ ಕೊಲೆ ಮಾಡಿ, ಬಳಿಕ ಹೆದ್ದಾರಿಯಲ್ಲಿ ಅಪಘಾತವಾಗಿದೆ ಎಂದು ಪೊಲೀಸರಿಗೆ ಕಥೆ ಕಟ್ಟಿದ್ದರು.

ಇದನ್ನೂ ಓದಿ: Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಸದ್ಯ, ಈ ಘಟನೆಯ ಸಂಬಂಧ ಗದಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪತ್ನಿಯ ಈ ಅನೈತಿಕ ಸಂಬಂಧಕ್ಕೆ ಅತ್ತ ಪತಿ ಮಸಣ ಸೇರಿದರೆ, ಇತ್ತ ನಾಲ್ಕು ವರ್ಷದ ಮಗು ಅನಾಥವಾಗಿದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ