Murder Case Image of murder symbol

Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕೊರಟಗೆರೆ: ಆಸ್ತಿಯ ವಿಚಾರಕ್ಕೆ ತಂದೆಯನ್ನು ಮಗನೇ ಮಚ್ಚಿನಲ್ಲಿ ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿರುವ ದುರ್ಘಟನೆ ಕೊರಟಗೆರೆ ತಾಲೂಕಿನಲ್ಲಿ ಸಂಭವಿಸಿದೆ.

ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದ 75 ವರ್ಷದ ವೆಂಕಟಪ್ಪ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ವೆಂಕಟ್ಟಪ್ಪ ಮೂರೂವರೆ ಎಕರೆ ಆಸ್ತಿ ಹೊಂದಿದ್ದನು. ಇತ್ತೀಚೆಗೆ ಒಂದಿಷ್ಟು ಜಮೀನು ಮಾರಾಟ ಮಾಡಿ ಬಂದ ಹಣವನ್ನು ಮಗಳಿಗೆ ಕೊಟ್ಟಿದ್ದರು. ಹಾಗೂ ಜಮೀನನ್ನೂ ಕೂಡ ಮಗಳ ಹೆಸರಿಗೆ ಬರೆದು ಕೊಟ್ಟಿದ್ದರು.

ಇದೇ ವಿಚಾರವಾಗಿ ಮಗ ಮಗ ಸಿದ್ದಪ್ಪ ಹಾಗೂ ಮೃತ ವೆಂಕಟಪ್ಪ ನಡುವೆ ಹಲವು ಬಾರಿ ಗಲಾಟೆಯಾಗಿದೆ. ಈ ಬಗ್ಗೆ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ಆದರೆ ಆಸ್ತಿಯನ್ನು ಮಗನಿಗೆ ಕೊಡಲು ವೆಂಕಟಪ್ಪ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಇದರಿಂದ ಬೇಸತ್ತು ಸಿದ್ದಪ್ಪ ವೆಂಕಟಪ್ಪನ ತಲೆಗೆ ಮಚ್ಚಿನಿಂದ (Murder) ಬಲವಾಗಿ ಹೊಡೆದಿದ್ದಾನೆ. ಆದರೆ ತೀವ್ರ ರಕ್ತಸ್ರಾವದಿಂದ ವೆಂಕಟಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ಸಿದ್ದಪ್ಪ ನಾಪತ್ತೆಯಾಗಿದ್ದಾನೆ.

ಸದ್ಯ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾಗಿರುವ ಮಗ ಸಿದ್ದಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟ‌ರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮಂಚಕ್ಕೆ ಕರೆದ ಸರ್ಕಾರಿ ಶಾಲೆಯೊಂದರ ಪ್ರಭಾರ ಮುಖ್ಯ ಶಿಕ್ಷಕನಿಗೆ ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಶಿಕ್ಷಕಿಯನ್ನು ಮಂಚಕ್ಕೆ ಕರೆದ ಮುಖ್ಯ ಶಿಕ್ಷಕನನ್ನು ರಾಯಚೂರು ನಗರದ ಹೊರವಲಯದಲ್ಲಿರುವ ಸರ್ಕಾರಿ ಶಾಲೆಯ ಮೆಹಬೂಬ್ ಅಲಿ ಎಂದು ಗುರುತಿಸಲಾಗಿದೆ.

ಈತ ತರಬೇತಿಗೆ ಬಂದಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ವರ್ತಿಸಿ, ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಈ ವಿಷಯ ತಿಳಿದ ಕೂಡಲೇ ಶಿಕ್ಷಕಿಯ ಕುಟುಂಬಸ್ಥರು ಶಾಲೆಗೆ ಆಗಮಿಸಿ ಅಲಿ ಬಟ್ಟೆ ಹರಿದು ಸ್ಥಳೀಯರೊಂದಿಗೆ ಸೇರಿ ಮನಬಂದಂತೆ ಥಳಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕ ಮೆಹಬೂಬ್ ಅಲಿ “ರಾತ್ರಿ ಮಲಗೋದಕ್ಕೆ ಬಾ 10 ಸಾವಿರ ಕೊಡುತ್ತೇನೆ” ಎಂದು ಅಶ್ಲೀಲವಾಗಿ ಮೆಸೇಜ್ ಮಾಡಿ ಹಿಂಸೆ ಕೊಟ್ಟಿದ್ದಾನೆ. ಇದನ್ನು ಶಿಕ್ಷಕಿ ನಮಗೆ ತಿಳಿಸಿದ್ದು ಕೂಡಲೇ ಶಾಲೆಗೆ ಆಗಮಿಸಿ ವಿಚಾರಿಸಿದೆವು. ಮೊದಲು ನಿರಾಕರಿಸಿದ ಆತ ನಂತರ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಶಿಕ್ಷಕಿಯ ಕುಟುಂಬಸ್ಥರು ತಿಳಿಸಿದ್ದಾರೆ.

ಶಿಕ್ಷಕಿಯು ವಿಚಾರವನ್ನು ಇಲಾಖೆಯ ಮೇಲಾಧಿಕಾರಿಗಳಿಗೆ ನೀಡಿದ ದೂರಿನ ಮೇರೆಗೆ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ್ ವಿಚಾರಣೆ ಕಾಯಂ ಅಮಾನುಗೊಳಿಸಿ ಆದೇಶ ಹೊರಡಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ