Murder Case Image of murder symbol

Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕೊರಟಗೆರೆ: ಆಸ್ತಿಯ ವಿಚಾರಕ್ಕೆ ತಂದೆಯನ್ನು ಮಗನೇ ಮಚ್ಚಿನಲ್ಲಿ ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿರುವ ದುರ್ಘಟನೆ ಕೊರಟಗೆರೆ ತಾಲೂಕಿನಲ್ಲಿ ಸಂಭವಿಸಿದೆ.

ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದ 75 ವರ್ಷದ ವೆಂಕಟಪ್ಪ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ವೆಂಕಟ್ಟಪ್ಪ ಮೂರೂವರೆ ಎಕರೆ ಆಸ್ತಿ ಹೊಂದಿದ್ದನು. ಇತ್ತೀಚೆಗೆ ಒಂದಿಷ್ಟು ಜಮೀನು ಮಾರಾಟ ಮಾಡಿ ಬಂದ ಹಣವನ್ನು ಮಗಳಿಗೆ ಕೊಟ್ಟಿದ್ದರು. ಹಾಗೂ ಜಮೀನನ್ನೂ ಕೂಡ ಮಗಳ ಹೆಸರಿಗೆ ಬರೆದು ಕೊಟ್ಟಿದ್ದರು.

ಇದೇ ವಿಚಾರವಾಗಿ ಮಗ ಮಗ ಸಿದ್ದಪ್ಪ ಹಾಗೂ ಮೃತ ವೆಂಕಟಪ್ಪ ನಡುವೆ ಹಲವು ಬಾರಿ ಗಲಾಟೆಯಾಗಿದೆ. ಈ ಬಗ್ಗೆ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ಆದರೆ ಆಸ್ತಿಯನ್ನು ಮಗನಿಗೆ ಕೊಡಲು ವೆಂಕಟಪ್ಪ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Hunagund: ಹಾಸ್ಟೆಲ್ ಗೆ ಲೋಕಾಯುಕ್ತ ಎಸ್ಪಿ ಭೇಟಿ.. ಅಧಿಕಾರಿಗಳಿಗೆ ತರಾಟೆ

ಇದರಿಂದ ಬೇಸತ್ತು ಸಿದ್ದಪ್ಪ ವೆಂಕಟಪ್ಪನ ತಲೆಗೆ ಮಚ್ಚಿನಿಂದ (Murder) ಬಲವಾಗಿ ಹೊಡೆದಿದ್ದಾನೆ. ಆದರೆ ತೀವ್ರ ರಕ್ತಸ್ರಾವದಿಂದ ವೆಂಕಟಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ಸಿದ್ದಪ್ಪ ನಾಪತ್ತೆಯಾಗಿದ್ದಾನೆ.

ಸದ್ಯ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾಗಿರುವ ಮಗ ಸಿದ್ದಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಶಿಕ್ಷಕಿಯನ್ನು ಮಂಚಕ್ಕೆ ಕರೆದ ಹೆಡ್ ಮಾಸ್ಟ‌ರ್! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಮಂಚಕ್ಕೆ ಕರೆದ ಸರ್ಕಾರಿ ಶಾಲೆಯೊಂದರ ಪ್ರಭಾರ ಮುಖ್ಯ ಶಿಕ್ಷಕನಿಗೆ ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಶಿಕ್ಷಕಿಯನ್ನು ಮಂಚಕ್ಕೆ ಕರೆದ ಮುಖ್ಯ ಶಿಕ್ಷಕನನ್ನು ರಾಯಚೂರು ನಗರದ ಹೊರವಲಯದಲ್ಲಿರುವ ಸರ್ಕಾರಿ ಶಾಲೆಯ ಮೆಹಬೂಬ್ ಅಲಿ ಎಂದು ಗುರುತಿಸಲಾಗಿದೆ.

ಈತ ತರಬೇತಿಗೆ ಬಂದಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ವರ್ತಿಸಿ, ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಈ ವಿಷಯ ತಿಳಿದ ಕೂಡಲೇ ಶಿಕ್ಷಕಿಯ ಕುಟುಂಬಸ್ಥರು ಶಾಲೆಗೆ ಆಗಮಿಸಿ ಅಲಿ ಬಟ್ಟೆ ಹರಿದು ಸ್ಥಳೀಯರೊಂದಿಗೆ ಸೇರಿ ಮನಬಂದಂತೆ ಥಳಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕ ಮೆಹಬೂಬ್ ಅಲಿ “ರಾತ್ರಿ ಮಲಗೋದಕ್ಕೆ ಬಾ 10 ಸಾವಿರ ಕೊಡುತ್ತೇನೆ” ಎಂದು ಅಶ್ಲೀಲವಾಗಿ ಮೆಸೇಜ್ ಮಾಡಿ ಹಿಂಸೆ ಕೊಟ್ಟಿದ್ದಾನೆ. ಇದನ್ನು ಶಿಕ್ಷಕಿ ನಮಗೆ ತಿಳಿಸಿದ್ದು ಕೂಡಲೇ ಶಾಲೆಗೆ ಆಗಮಿಸಿ ವಿಚಾರಿಸಿದೆವು. ಮೊದಲು ನಿರಾಕರಿಸಿದ ಆತ ನಂತರ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಶಿಕ್ಷಕಿಯ ಕುಟುಂಬಸ್ಥರು ತಿಳಿಸಿದ್ದಾರೆ.

ಶಿಕ್ಷಕಿಯು ವಿಚಾರವನ್ನು ಇಲಾಖೆಯ ಮೇಲಾಧಿಕಾರಿಗಳಿಗೆ ನೀಡಿದ ದೂರಿನ ಮೇರೆಗೆ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ್ ವಿಚಾರಣೆ ಕಾಯಂ ಅಮಾನುಗೊಳಿಸಿ ಆದೇಶ ಹೊರಡಿಸಿದ್ದಾರೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ