Mutsadi Kashappan, a born and active political activist, passed away

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುಟ್ಟು ಹೋರಾಟಗಾರ ರಾಜಕೀಯ ಮುತ್ಸದಿ ಕಾಶಪ್ಪನವರ ಅಗಲಿಕೆ ಎರಡು ದಶಕಗಳು

ಹುನಗುಂದ-ಅಖಂಡ ವಿಜಯಪುರ ಮತ್ತು ಬಾಗಲಕೋಟಿ ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣ ನದಿಯ ದಡದಲ್ಲಿರುವ ಒಂದು ಪುಟ್ಟ ಗ್ರಾಮವಾದ ಹಾವರಗಿಯಲ್ಲಿ ಜನಿಸಿದ ಲಿಂ, ಎಸ್.ಆರ್.ಕಾಶಪ್ಪನವರ ಮೊದಲು ತಾಲೂಕ ಅಭಿವೃದ್ದಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜರ್ನಿ ಆರಂಭಿಸುವ ಮೂಲಕ ರಾಜ್ಯ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನದವರಿಗೂ ಸಾಗಿದರು. ಹಮ್ಮು ಬಿಮ್ಮಿಲ್ಲದ ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು. ಜಿಗಿಟುತನ ಹಾಗೂ ಜವಾರಿ ಭಾಷೆ ಮತ್ತು ಸ್ವಭಾವ ಅವರನ್ನು ಅಲ್ಲಿಯತನಕ ಕರೆದುಕೊಂಡು ಹೋಗಿದ್ದಲ್ಲದೇ ಇವರು ಇಂದಿಗೂ ಜನರ ಮನಸಿನಲ್ಲಿ ಸದಾ ಜನಾನುರಾಗಿ ಮತ್ತು ಮುತ್ಸದ್ದಿ ನಾಯಕ ಎನ್ನಿಸಿಕೊಂಡಿದ್ದರು.

೧೯೪೯ ಫೆಬ್ರವರಿ ೨೬ ರಂದು ಹಾವರಗಿಯಲ್ಲಿ ಜನಸಿದ ಲಿಂ, ಎಸ್. ಆರ್. ಕಾಶಪ್ಪನವರ ೨೦೦೩ ಜೂನ್ ೨೭ ರಂದು ಆಕಸ್ಮಿಕ ಅಫಘಾತದಲ್ಲಿ ನಿಧನರಾದರು. ಬದುಕಿದ್ದರೇ ರಾಜ್ಯದ ಲಿಂಗಾಯತ ಅಗ್ರಗಣ್ಯ ನಾಯಕರಾಗುತ್ತಿದ್ದರೆಂದು ಅವರಲ್ಲಿದ್ದ ಮುತ್ಸದ್ದಿ ನಾಯಕತ್ವ ಕಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹೇಳುವ ಮೂಲಕ ಕಾಂಗ್ರೆಸ್‌ಗೆ ಕಾಶಪ್ಪನವರ ಅನಿವಾರ್ಯ ಆಗಿದ್ದರೆಂದು ಹೇಳಿದ ಮಾತು ಮರೆಯಲಾಗುವುದು.

ಹಾವರಗಿಯಂತಹ ಸಣ್ಣ ಹಳ್ಳಿಯಿಂದ ತಮ್ಮ ರಾಜಕೀಯವನ್ನು ಆರಂಭಿಸಿ ಇವರು ಮೊದಲ ಬಾರಿಗೆ ತಾಲೂಕ ಅಭಿವೃದ್ಧಿ ಮಂಡಳಿ(ಟಿಡಿಬಿ) ಸದಸ್ಯರಾಗಿ ಮತ್ತು ಅಧ್ಯಕ್ಷರಾದರು. ೧೯೮೫ ರಲ್ಲಿ ವಿಧಾನಸಭೆ ಸ್ಪರ್ಧಿಸಿ ಅಲ್ಪ ಮತಗಳಿಂದ ಸೋಲನ್ನು ಕಂಡರೂ. ಛಲ ಬಿಡದೇ ಪಕ್ಷ ಸಂಘಟಿಸಿ ೧೯೮೯ ರಲ್ಲಿ ತಮ್ಮನ್ನು ಸೋಲಿಸಿದ ಲಿಂ,ಎಸ್.ಎಸ್.ಕಡಪಟ್ಟಿ ಅವರ ವಿರುದ್ದವೇ ಅತ್ಯಧಿಕ ಮತಗಳಿಂದ ಅವರನ್ನು ಸೋಲಿಸಿ ಮೊದಲು ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದರು. ನಂತರ ಸತತ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರರಾಗಿದ್ದರು. ಮುಂದಿನ ರಾಜಕೀಯ ನಡೆ ಬೆರಗು ಹುಟ್ಟಿಸಿತ್ತು. ರಾಜಕೀಯ ಹೆಜ್ಜೆ ಮತ್ತು ಅವರ ದಿಟ್ಟ ನಿಲುವುಗಳು, ಪ್ರಾಮಾಣಿಕ ಜನಸೇವೆ, ಅವರಲ್ಲಿನ ಜಿಗುಟುತನ, ಜವಾರಿ ಸ್ವಭಾವ ಅವರನ್ನು ರಾಜ್ಯದ ಕ್ಯಾಬಿನೆಟ್ ಮಂತ್ರಿಯ ಹುದ್ದೆಯವರಗೂ ಕರೆದ್ಯೋಯಿತು.

ಸದಾ ರೈತಪರ ಚಿಂತಕರು-ಸದಾ ರೈತಪರ ಕಾಳಜಿಯುಳ್ಳ ಅವರು ಭೀಮಾನದಿ ಗೇಟ್ ಕಿತ್ತಿದ್ದು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಇಂತಹ ಎಂಟೆದೆಯ ರಾಜಕಾರಣಿ ಕಂಡಿದ್ದು ಅಪರೂಪ ಇಂದಿಗೂ ಅವರ ಬಗ್ಗೆ ಮಾತನಾಡುತ್ತಾರೆ. ತಮ್ಮ ಹತ್ತಿರದವರಿಗಿಂತ ವೈರಿಗಳನ್ನು ಮಾತಾಡಿಸುವ ಮತ್ತು ಅವರ ಮನಸ್ಸು ಬದಲಾಯಿಸುವ ಚಾಣಕ್ಯ. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡುತ್ತಿದ್ದರೂ ಗೆದ್ದ ನಂತರ ಕ್ಷೇತ್ರದ ಜನತೆಯನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಒಂದು ರೀತಿಯ ಅಜಾತಶತ್ರುವೇ ಸರಿ.

ವಿಶಿಷ್ಠ ಉಡುಪು ಧಾರಣೆ-ಖಾದಿ ದೋತರ,ನೆಹರು ಶರ್ಟ್,ಉಣ್ಣೆಯ ಟೋಪಿ ಅವರ ಆಕರ್ಷಕ ಉಡುಪುಗಳಾಗಿದ್ದವು. ಜವಾರಿ ಮಾತು, ಒಂದಷ್ಟು ಒರಟುತನ, ಕ್ಷಣದಲ್ಲೇ ಮಗುವಿನಂತೆ ಮೃದುವಾಗುವ ಅವರ ಗುಣ ಒಮ್ಮೊಮ್ಮೆ ವರ್ಣರಂಜಿತ ವ್ಯಕ್ತತ್ವ. ತಾವು ಆಡಿದ್ದೇ ನಡೆಯಬೇಕೆಂಬ ಹಠದ ಸ್ವಭಾವ ಅವರದು.

ಪಂಚಮಸಾಲಿ ಸಮಾಜ ಅಗ್ರಗಣ್ಯ ನಾಯಕರು-ಕಾಶಪ್ಪನವರ ಪಂಚಮಸಾಲಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರ. ಅದರ ರಾಜ್ಯಾಧ್ಯಕ್ಷರಾಗಿ ಗಮನಾರ್ಹ ಸೇವೆ ಮಾಡಿದ್ದರು. ರಾಜ್ಯದ ವಿವಿಧ ಕಡೆ ಸಮಾಜದ ಮುಖಂಡರು ಬೆಳೆಸಿ ರಾಜಕಾರಣದಲ್ಲಿ ಮಿಂಚಿ ಮರೆಯಾದ ಮಾಣಿಕ್ಯ. ಇಂತಹ ಮೇರು ನಾಯಕ ಮರೆಯಾಗಿ ಇಂದಿಗೆ ಎರಡು ಸಂಧಿವೆ. ಅಂತಹ ನಾಯಕರು ಮರಳಿ ಹುಟ್ಟಲಿ ಎನ್ನುವುದೇ ಅವರ ಅಭಿಮಾನಿಗಳ ಆಸೆವಾಗಿದೆ.
ಅಭಿವೃದ್ದಿಯ ಹರಿಕಾರರು-ತಮ್ಮ ೧೪ ವರ್ಷದ ಸುದೀರ್ಘ ಅಧಿಕಾರ ಅವಧಿಯಲ್ಲಿ ತಾಲೂಕಿನ ಕೋಟ್ಯಾಂತರ ರೂಪಾಯಿ ಅನುದಾನವನ್ನು ತಂದು ಮರೋಳ ಏತನೀರಾವರಿ, ಕೂಡಲಸಂಗಮ ಅಭಿವೃದ್ಧಿ, ಅಲ್ಲಿನ ಜಿಟಿಟಿಸಿ ಕಾಲೇಜು ಸ್ಥಾಪನೆ, ಶಾಲಾ ಕಾಲೇಜುಗಳ ಮಂಜೂರಿ ಮತ್ತು ನಿರ್ಮಾಣ, ಪಶು ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಅಡಿಹಾಳ ಸೇತುವೆ ನಿರ್ಮಾಣಕ್ಕೆ ಕನಸ್ಸು ಕಂಡವರು. ಮುಳಗಡೆ ಗ್ರಾಮಗಳ ಸ್ಥಳಾಂತರ, ವಿವಿಧ ಯೋಜನೆಯಲ್ಲಿ ಸಾವಿರಾರು ಮನೆಗಳ ನಿರ್ಮಾಣ, ಹುನಗುಂದದಲ್ಲಿ ತಾಲೂಕ ಕ್ರೀಡಾಂಗಣ, ಇಳಕಲ್ ಡೈಟ್ ಆರಂಭ ಸೇರಿದಂತೆ ನೂರಾರು ಕೋಟಿ ಅನುದಾನ ತಂದು ಇಡೀ ಮತಕ್ಷೇತ್ರದ ಅಭಿವೃದ್ಧಿಗೆ ಅವಿರತ ಶ್ರಮಿಸಿದ್ದರು.

ಬಾಕ್ಸ್ ಸುದ್ದಿ-ಸದಾ ರೈತಪರ ಕಾಳಜಿಯುಳ್ಳ ಅವರು ರೈತರಿಗಾಗಿ ಭೀಮಾನದಿ ಗೇಟ್ ಕಿತ್ತಿದ್ದನ್ನು ಇಂದಿಗೂ ಕೂಡಾ ರೈತರು ಮರೆತ್ತಿಲ್ಲ. ಜನಸಾಮಾನ್ಯರ ಮಧ್ಯದಲ್ಲಿ ಬೆಳೆದು ಬಂದ ಎಸ್‌ಆರ್‌ಕೆ ಸರ್ವ ಸಮಾಜ ಮತ್ತು ಸಮುದಾಯಗಳ ದೀಮಂತ ನಾಯಕರಾಗಿದ್ದರು. ಸದಾ ತಾವಂದು ಕೊಂಡಂತೆ ನಡೆಬೇಕು ಎನ್ನುವ ಹಠವಾದಿಗಳಾಗಿದ್ದರು. ಹೋರಾಟದಲ್ಲಿ ಒಂದು ಹೆಜ್ಜೆ ಮುಂದಿದ್ದರು. ಪಂಚಮಸಾಲಿ ಸಮಾಜದ ಅಗ್ರಗಣ್ಯ ನಾಯಕರಾಗಿ ಸಮಾಜ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರವಾಗಿತ್ತು. ಇಂತಹ ಜನಾನುರಾಗಿ, ಮುತ್ಸದ್ದಿ ನಾಯಕರು ಮರೆಯಾಗಿ ಇಂದಿಗೆ ಎರಡು ದಶಕಗಳು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ