Nad Gowda: There is no need to bring politics in the soap business

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪು ಮಾರಾಟಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರ ಹಿಂದೆ ಮಾರುಕಟ್ಟೆಯ ತಂತ್ರಗಾರಿಕೆ ಇದೆ. ಅವರಿಗೆ ದೇಶವ್ಯಾಪಿ ಹೆಚ್ಚಿನ ಫಾಲೋವರ್ಸ್ ಇದ್ದು ಅದರಿಂದ ಮಾರಾಟದಲ್ಲಿ ಹೆಚ್ಚಳವಾಗಲಿದೆ ಎಂದರು.

ಈಗಾಗಲೇ ಶೇ.15 ರಿಂದ 18% ರಷ್ಟು ಸೋಪು ಮಾರಾಟ ಹೆಚ್ಚಳವಾಗಿದೆ. ಈ ಮುಂಚೆ ಇಂತಹದ್ದೇ ನಟಿಯನ್ನು ಪ್ರಚಾರಕ್ಕೆ ನೇಮಿಸಲು ನಿರ್ಧಾರ ಮಾಡಿರಲಿಲ್ಲ. ಎಂ. ಬಿ. ಪಾಟೀಲ ಅವರು ಮಂತ್ರಿ ಇದ್ದಾಗ ಈ ನಿರ್ಧಾರ ತಗೆದುಕೊಂಡಿದ್ದರು. ಕರ್ನಾಟಕದ ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ, ಪೂಜಾ ಮತ್ತಿತರರು ಬೇರೆ ಬೇರೆ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಕೈ ಬಿಟ್ಟು ತಮನ್ನಾ ಅವರನ್ನು ಜಾಹೀರಾತಿನಲ್ಲಿ ತೊಡಗಿಸಿದರೆ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಸೋಪು ಮಾರಾಟ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯವಾಗಿ ಸಾಮಾನ್ಯ ಜನರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಕ್ಕೂ ಸಾಧ್ಯವಿದೆ. ಕರ್ನಾಟಕದಲ್ಲಿ ಸಾಮಾನ್ಯ ಜನರು ಸೋಪು ಬಳಸಿದ ಬಳಿಕ ಅದರ ಗುಣಮಟ್ಟ ಹೇಗಿದೆ ಎಂದು ಜಾಹೀರಾತು ಮಾಡಿ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶವಿದೆ. ನಮಗೆ ಯಾರಿಗೂ ಮನಸ್ಸಿಗೆ ತೊಂದರೆ ಕೊಡುವ ವಿಚಾರವಲ್ಲ. 25-30 ವರ್ಷದ ಹಿಂದೆ ಯರ‍್ಯಾರು ಈ ಸೋಪಿನ ಪ್ರಚಾರ ರಾಯಭಾರಿಗಳಾಗಿದ್ದರು ಎಂಬುದನ್ನು ದಾಖಲೆಗಳ ಸಮೇತ ಮುಂದೆ ಹೇಳುತ್ತೇನೆ. ಮಾರುಕಟ್ಟೆ ತಂತ್ರಗಾರಿಕೆ ಇದು ವ್ಯಾಪಾರ. ಸೀಮಿತವಾಗಿ ಮಾಡುವಂತಹದ್ದಲ್ಲ ಎಂದು ಹೇಳಿದರು.

ಸೌದಿಯಲ್ಲಿ ನಮ್ಮ ರಾಜ್ಯದ ಸೋಪು ಮಾರಬೇಕಾದರೆ ಅಲ್ಲಿನವರ ಮಾಡೆಲ್‌ನವರನ್ನು ತಗೆದುಕೊಂಡೇ ಪ್ರಚಾರ ಮಾಡಬೇಕಾಗುತ್ತದೆ. ಯಾರ ಭಾವನೆಗಳಿಗೂ ಧಕ್ಕೆ ತಂದಿಲ್ಲ. ಮುಂದೊಂದು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಸೋಪು ಮಾರಾಟ ಮಾಡಬೇಕಾದರೆ ಅಲ್ಲಿನ ಪ್ರಾದೇಶಿಕತೆಯನ್ನೇ ಆಧಾರವಾಗಿಟ್ಟುಕೊಂಡು ನಾವು ಮಾರುಕಟ್ಟೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಸಿ.ಬಿ.ಅಸ್ಕಿ, ವಾಯ್. ಎಚ್. ವಿಜಯಕರ್, ಸದು ಮಠ ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ