Nad Gowda: There is no need to bring politics in the soap business

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪು ಮಾರಾಟಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರ ಹಿಂದೆ ಮಾರುಕಟ್ಟೆಯ ತಂತ್ರಗಾರಿಕೆ ಇದೆ. ಅವರಿಗೆ ದೇಶವ್ಯಾಪಿ ಹೆಚ್ಚಿನ ಫಾಲೋವರ್ಸ್ ಇದ್ದು ಅದರಿಂದ ಮಾರಾಟದಲ್ಲಿ ಹೆಚ್ಚಳವಾಗಲಿದೆ ಎಂದರು.

ಈಗಾಗಲೇ ಶೇ.15 ರಿಂದ 18% ರಷ್ಟು ಸೋಪು ಮಾರಾಟ ಹೆಚ್ಚಳವಾಗಿದೆ. ಈ ಮುಂಚೆ ಇಂತಹದ್ದೇ ನಟಿಯನ್ನು ಪ್ರಚಾರಕ್ಕೆ ನೇಮಿಸಲು ನಿರ್ಧಾರ ಮಾಡಿರಲಿಲ್ಲ. ಎಂ. ಬಿ. ಪಾಟೀಲ ಅವರು ಮಂತ್ರಿ ಇದ್ದಾಗ ಈ ನಿರ್ಧಾರ ತಗೆದುಕೊಂಡಿದ್ದರು. ಕರ್ನಾಟಕದ ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ, ಪೂಜಾ ಮತ್ತಿತರರು ಬೇರೆ ಬೇರೆ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಕೈ ಬಿಟ್ಟು ತಮನ್ನಾ ಅವರನ್ನು ಜಾಹೀರಾತಿನಲ್ಲಿ ತೊಡಗಿಸಿದರೆ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಸೋಪು ಮಾರಾಟ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯವಾಗಿ ಸಾಮಾನ್ಯ ಜನರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಕ್ಕೂ ಸಾಧ್ಯವಿದೆ. ಕರ್ನಾಟಕದಲ್ಲಿ ಸಾಮಾನ್ಯ ಜನರು ಸೋಪು ಬಳಸಿದ ಬಳಿಕ ಅದರ ಗುಣಮಟ್ಟ ಹೇಗಿದೆ ಎಂದು ಜಾಹೀರಾತು ಮಾಡಿ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶವಿದೆ. ನಮಗೆ ಯಾರಿಗೂ ಮನಸ್ಸಿಗೆ ತೊಂದರೆ ಕೊಡುವ ವಿಚಾರವಲ್ಲ. 25-30 ವರ್ಷದ ಹಿಂದೆ ಯರ‍್ಯಾರು ಈ ಸೋಪಿನ ಪ್ರಚಾರ ರಾಯಭಾರಿಗಳಾಗಿದ್ದರು ಎಂಬುದನ್ನು ದಾಖಲೆಗಳ ಸಮೇತ ಮುಂದೆ ಹೇಳುತ್ತೇನೆ. ಮಾರುಕಟ್ಟೆ ತಂತ್ರಗಾರಿಕೆ ಇದು ವ್ಯಾಪಾರ. ಸೀಮಿತವಾಗಿ ಮಾಡುವಂತಹದ್ದಲ್ಲ ಎಂದು ಹೇಳಿದರು.

ಸೌದಿಯಲ್ಲಿ ನಮ್ಮ ರಾಜ್ಯದ ಸೋಪು ಮಾರಬೇಕಾದರೆ ಅಲ್ಲಿನವರ ಮಾಡೆಲ್‌ನವರನ್ನು ತಗೆದುಕೊಂಡೇ ಪ್ರಚಾರ ಮಾಡಬೇಕಾಗುತ್ತದೆ. ಯಾರ ಭಾವನೆಗಳಿಗೂ ಧಕ್ಕೆ ತಂದಿಲ್ಲ. ಮುಂದೊಂದು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಸೋಪು ಮಾರಾಟ ಮಾಡಬೇಕಾದರೆ ಅಲ್ಲಿನ ಪ್ರಾದೇಶಿಕತೆಯನ್ನೇ ಆಧಾರವಾಗಿಟ್ಟುಕೊಂಡು ನಾವು ಮಾರುಕಟ್ಟೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಸಿ.ಬಿ.ಅಸ್ಕಿ, ವಾಯ್. ಎಚ್. ವಿಜಯಕರ್, ಸದು ಮಠ ಇದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ