Nad Gowda: There is no need to bring politics in the soap business

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪು ಮಾರಾಟಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರ ಹಿಂದೆ ಮಾರುಕಟ್ಟೆಯ ತಂತ್ರಗಾರಿಕೆ ಇದೆ. ಅವರಿಗೆ ದೇಶವ್ಯಾಪಿ ಹೆಚ್ಚಿನ ಫಾಲೋವರ್ಸ್ ಇದ್ದು ಅದರಿಂದ ಮಾರಾಟದಲ್ಲಿ ಹೆಚ್ಚಳವಾಗಲಿದೆ ಎಂದರು.

ಈಗಾಗಲೇ ಶೇ.15 ರಿಂದ 18% ರಷ್ಟು ಸೋಪು ಮಾರಾಟ ಹೆಚ್ಚಳವಾಗಿದೆ. ಈ ಮುಂಚೆ ಇಂತಹದ್ದೇ ನಟಿಯನ್ನು ಪ್ರಚಾರಕ್ಕೆ ನೇಮಿಸಲು ನಿರ್ಧಾರ ಮಾಡಿರಲಿಲ್ಲ. ಎಂ. ಬಿ. ಪಾಟೀಲ ಅವರು ಮಂತ್ರಿ ಇದ್ದಾಗ ಈ ನಿರ್ಧಾರ ತಗೆದುಕೊಂಡಿದ್ದರು. ಕರ್ನಾಟಕದ ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ, ಪೂಜಾ ಮತ್ತಿತರರು ಬೇರೆ ಬೇರೆ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಕೈ ಬಿಟ್ಟು ತಮನ್ನಾ ಅವರನ್ನು ಜಾಹೀರಾತಿನಲ್ಲಿ ತೊಡಗಿಸಿದರೆ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಸೋಪು ಮಾರಾಟ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯವಾಗಿ ಸಾಮಾನ್ಯ ಜನರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಕ್ಕೂ ಸಾಧ್ಯವಿದೆ. ಕರ್ನಾಟಕದಲ್ಲಿ ಸಾಮಾನ್ಯ ಜನರು ಸೋಪು ಬಳಸಿದ ಬಳಿಕ ಅದರ ಗುಣಮಟ್ಟ ಹೇಗಿದೆ ಎಂದು ಜಾಹೀರಾತು ಮಾಡಿ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶವಿದೆ. ನಮಗೆ ಯಾರಿಗೂ ಮನಸ್ಸಿಗೆ ತೊಂದರೆ ಕೊಡುವ ವಿಚಾರವಲ್ಲ. 25-30 ವರ್ಷದ ಹಿಂದೆ ಯರ‍್ಯಾರು ಈ ಸೋಪಿನ ಪ್ರಚಾರ ರಾಯಭಾರಿಗಳಾಗಿದ್ದರು ಎಂಬುದನ್ನು ದಾಖಲೆಗಳ ಸಮೇತ ಮುಂದೆ ಹೇಳುತ್ತೇನೆ. ಮಾರುಕಟ್ಟೆ ತಂತ್ರಗಾರಿಕೆ ಇದು ವ್ಯಾಪಾರ. ಸೀಮಿತವಾಗಿ ಮಾಡುವಂತಹದ್ದಲ್ಲ ಎಂದು ಹೇಳಿದರು.

ಸೌದಿಯಲ್ಲಿ ನಮ್ಮ ರಾಜ್ಯದ ಸೋಪು ಮಾರಬೇಕಾದರೆ ಅಲ್ಲಿನವರ ಮಾಡೆಲ್‌ನವರನ್ನು ತಗೆದುಕೊಂಡೇ ಪ್ರಚಾರ ಮಾಡಬೇಕಾಗುತ್ತದೆ. ಯಾರ ಭಾವನೆಗಳಿಗೂ ಧಕ್ಕೆ ತಂದಿಲ್ಲ. ಮುಂದೊಂದು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಸೋಪು ಮಾರಾಟ ಮಾಡಬೇಕಾದರೆ ಅಲ್ಲಿನ ಪ್ರಾದೇಶಿಕತೆಯನ್ನೇ ಆಧಾರವಾಗಿಟ್ಟುಕೊಂಡು ನಾವು ಮಾರುಕಟ್ಟೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಸಿ.ಬಿ.ಅಸ್ಕಿ, ವಾಯ್. ಎಚ್. ವಿಜಯಕರ್, ಸದು ಮಠ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ