Nad Gowda: There is no need to bring politics in the soap business

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪು ಮಾರಾಟಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರ ಹಿಂದೆ ಮಾರುಕಟ್ಟೆಯ ತಂತ್ರಗಾರಿಕೆ ಇದೆ. ಅವರಿಗೆ ದೇಶವ್ಯಾಪಿ ಹೆಚ್ಚಿನ ಫಾಲೋವರ್ಸ್ ಇದ್ದು ಅದರಿಂದ ಮಾರಾಟದಲ್ಲಿ ಹೆಚ್ಚಳವಾಗಲಿದೆ ಎಂದರು.

ಈಗಾಗಲೇ ಶೇ.15 ರಿಂದ 18% ರಷ್ಟು ಸೋಪು ಮಾರಾಟ ಹೆಚ್ಚಳವಾಗಿದೆ. ಈ ಮುಂಚೆ ಇಂತಹದ್ದೇ ನಟಿಯನ್ನು ಪ್ರಚಾರಕ್ಕೆ ನೇಮಿಸಲು ನಿರ್ಧಾರ ಮಾಡಿರಲಿಲ್ಲ. ಎಂ. ಬಿ. ಪಾಟೀಲ ಅವರು ಮಂತ್ರಿ ಇದ್ದಾಗ ಈ ನಿರ್ಧಾರ ತಗೆದುಕೊಂಡಿದ್ದರು. ಕರ್ನಾಟಕದ ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ, ಪೂಜಾ ಮತ್ತಿತರರು ಬೇರೆ ಬೇರೆ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಕೈ ಬಿಟ್ಟು ತಮನ್ನಾ ಅವರನ್ನು ಜಾಹೀರಾತಿನಲ್ಲಿ ತೊಡಗಿಸಿದರೆ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಸೋಪು ಮಾರಾಟ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯವಾಗಿ ಸಾಮಾನ್ಯ ಜನರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಕ್ಕೂ ಸಾಧ್ಯವಿದೆ. ಕರ್ನಾಟಕದಲ್ಲಿ ಸಾಮಾನ್ಯ ಜನರು ಸೋಪು ಬಳಸಿದ ಬಳಿಕ ಅದರ ಗುಣಮಟ್ಟ ಹೇಗಿದೆ ಎಂದು ಜಾಹೀರಾತು ಮಾಡಿ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶವಿದೆ. ನಮಗೆ ಯಾರಿಗೂ ಮನಸ್ಸಿಗೆ ತೊಂದರೆ ಕೊಡುವ ವಿಚಾರವಲ್ಲ. 25-30 ವರ್ಷದ ಹಿಂದೆ ಯರ‍್ಯಾರು ಈ ಸೋಪಿನ ಪ್ರಚಾರ ರಾಯಭಾರಿಗಳಾಗಿದ್ದರು ಎಂಬುದನ್ನು ದಾಖಲೆಗಳ ಸಮೇತ ಮುಂದೆ ಹೇಳುತ್ತೇನೆ. ಮಾರುಕಟ್ಟೆ ತಂತ್ರಗಾರಿಕೆ ಇದು ವ್ಯಾಪಾರ. ಸೀಮಿತವಾಗಿ ಮಾಡುವಂತಹದ್ದಲ್ಲ ಎಂದು ಹೇಳಿದರು.

ಸೌದಿಯಲ್ಲಿ ನಮ್ಮ ರಾಜ್ಯದ ಸೋಪು ಮಾರಬೇಕಾದರೆ ಅಲ್ಲಿನವರ ಮಾಡೆಲ್‌ನವರನ್ನು ತಗೆದುಕೊಂಡೇ ಪ್ರಚಾರ ಮಾಡಬೇಕಾಗುತ್ತದೆ. ಯಾರ ಭಾವನೆಗಳಿಗೂ ಧಕ್ಕೆ ತಂದಿಲ್ಲ. ಮುಂದೊಂದು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಸೋಪು ಮಾರಾಟ ಮಾಡಬೇಕಾದರೆ ಅಲ್ಲಿನ ಪ್ರಾದೇಶಿಕತೆಯನ್ನೇ ಆಧಾರವಾಗಿಟ್ಟುಕೊಂಡು ನಾವು ಮಾರುಕಟ್ಟೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಸಿ.ಬಿ.ಅಸ್ಕಿ, ವಾಯ್. ಎಚ್. ವಿಜಯಕರ್, ಸದು ಮಠ ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ