Nad Gowda: There is no need to bring politics in the soap business

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪು ಮಾರಾಟಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿದ್ದರ ಹಿಂದೆ ಮಾರುಕಟ್ಟೆಯ ತಂತ್ರಗಾರಿಕೆ ಇದೆ. ಅವರಿಗೆ ದೇಶವ್ಯಾಪಿ ಹೆಚ್ಚಿನ ಫಾಲೋವರ್ಸ್ ಇದ್ದು ಅದರಿಂದ ಮಾರಾಟದಲ್ಲಿ ಹೆಚ್ಚಳವಾಗಲಿದೆ ಎಂದರು.

ಈಗಾಗಲೇ ಶೇ.15 ರಿಂದ 18% ರಷ್ಟು ಸೋಪು ಮಾರಾಟ ಹೆಚ್ಚಳವಾಗಿದೆ. ಈ ಮುಂಚೆ ಇಂತಹದ್ದೇ ನಟಿಯನ್ನು ಪ್ರಚಾರಕ್ಕೆ ನೇಮಿಸಲು ನಿರ್ಧಾರ ಮಾಡಿರಲಿಲ್ಲ. ಎಂ. ಬಿ. ಪಾಟೀಲ ಅವರು ಮಂತ್ರಿ ಇದ್ದಾಗ ಈ ನಿರ್ಧಾರ ತಗೆದುಕೊಂಡಿದ್ದರು. ಕರ್ನಾಟಕದ ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ, ಪೂಜಾ ಮತ್ತಿತರರು ಬೇರೆ ಬೇರೆ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರನ್ನು ಕೈ ಬಿಟ್ಟು ತಮನ್ನಾ ಅವರನ್ನು ಜಾಹೀರಾತಿನಲ್ಲಿ ತೊಡಗಿಸಿದರೆ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಸೋಪು ಮಾರಾಟ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯವಾಗಿ ಸಾಮಾನ್ಯ ಜನರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಕ್ಕೂ ಸಾಧ್ಯವಿದೆ. ಕರ್ನಾಟಕದಲ್ಲಿ ಸಾಮಾನ್ಯ ಜನರು ಸೋಪು ಬಳಸಿದ ಬಳಿಕ ಅದರ ಗುಣಮಟ್ಟ ಹೇಗಿದೆ ಎಂದು ಜಾಹೀರಾತು ಮಾಡಿ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶವಿದೆ. ನಮಗೆ ಯಾರಿಗೂ ಮನಸ್ಸಿಗೆ ತೊಂದರೆ ಕೊಡುವ ವಿಚಾರವಲ್ಲ. 25-30 ವರ್ಷದ ಹಿಂದೆ ಯರ‍್ಯಾರು ಈ ಸೋಪಿನ ಪ್ರಚಾರ ರಾಯಭಾರಿಗಳಾಗಿದ್ದರು ಎಂಬುದನ್ನು ದಾಖಲೆಗಳ ಸಮೇತ ಮುಂದೆ ಹೇಳುತ್ತೇನೆ. ಮಾರುಕಟ್ಟೆ ತಂತ್ರಗಾರಿಕೆ ಇದು ವ್ಯಾಪಾರ. ಸೀಮಿತವಾಗಿ ಮಾಡುವಂತಹದ್ದಲ್ಲ ಎಂದು ಹೇಳಿದರು.

ಸೌದಿಯಲ್ಲಿ ನಮ್ಮ ರಾಜ್ಯದ ಸೋಪು ಮಾರಬೇಕಾದರೆ ಅಲ್ಲಿನವರ ಮಾಡೆಲ್‌ನವರನ್ನು ತಗೆದುಕೊಂಡೇ ಪ್ರಚಾರ ಮಾಡಬೇಕಾಗುತ್ತದೆ. ಯಾರ ಭಾವನೆಗಳಿಗೂ ಧಕ್ಕೆ ತಂದಿಲ್ಲ. ಮುಂದೊಂದು ದಿನ ಬೇರೆ ಬೇರೆ ರಾಜ್ಯಗಳಲ್ಲಿ ಸೋಪು ಮಾರಾಟ ಮಾಡಬೇಕಾದರೆ ಅಲ್ಲಿನ ಪ್ರಾದೇಶಿಕತೆಯನ್ನೇ ಆಧಾರವಾಗಿಟ್ಟುಕೊಂಡು ನಾವು ಮಾರುಕಟ್ಟೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಸಿ.ಬಿ.ಅಸ್ಕಿ, ವಾಯ್. ಎಚ್. ವಿಜಯಕರ್, ಸದು ಮಠ ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ