ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು

ನಾಡಗೌಡರೇ, ನನ್ನ ತಾಳ್ಮೆಗೂ ಮೀತಿ ಇದೆ-ನಡಹಳ್ಳಿ ಹೇಳಿಕೆ ಅನುದಾನ ತಂದಿದ್ದರೆ ದಾಖಲೆ ಬಿಡುಗಡೆ ಮಾಡಿ-ಸವಾಲು

ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಮತಕತ್ಷೇತ್ರದ ಅಭಿವೃದ್ಧಿಗೆ ಒಂದೇ ಒಂದು ಕೋಟಿ ರೂಪಾಯಿ ಅನುದಾನ ತಂದಿದ್ದರೆ ಅದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹಾಲಿ ಶಾಸಕ ಸಿ.ಎಸ್.ನಾಡಗೌಡರಿಗೆ ಸವಾಲು ಹಾಕಿದ್ದಾರೆ.

ಪಟ್ಟಣದ ದಾಸೋಹ ನಿಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜನ ಆತ್ಮಾವಲೋಕ ಮಾಡಿಕೊಳ್ಳಬೇಕು.ಮುದ್ದೇಬಿಹಾಳ ಅತೀ ಹಿಂದುಳಿದ ತಾಲ್ಲೂಕು ಎಂದು ಗೋವಿಂದರಾವ್ ವರದಿಯಲ್ಲಿ ತಿಳಿಸಲಾಗಿದೆ.ಜಗತ್ತೆಲ್ಲಾ ಅಭಿವೃದ್ದಿ ಹೊಂದಿದರೂ ಮುದ್ದೇಬಿಹಾಳ ಎಲ್ಲಿ ಇರಬೇಕೋ ಅಲ್ಲಿಯೇ ಇರಬೇಕಾಗುತ್ತದೆ.ಇದಕ್ಕಾಗಿ ಜನತೆ ಜಾಗೃತಿಯಾಗದಿದ್ದರೆ ಎಚ್ಚೆತ್ತುಕೊಳ್ಳದಿದ್ದರೆ ನಿಮ್ಮ ಮಕ್ಕಳ ಶಾಪ ನಿಮಗೆ ತಟ್ಟುತ್ತದೆ.ನಿಷ್ಕಿçಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾ ಹೋದರೆ ಭವಿಷ್ಯದಲ್ಲಿ ನಿಮ್ಮ ಮಕ್ಕಳು ಅನುಭವಿಸುತ್ತಾರೆ ಎಂದು ಹೇಳಿದರು.

ಒಳಚರಂಡಿಯಲ್ಲಿ ನೀವು ಕೂಡುವ ಶೌಚವೇ ನಿಮ್ಮ ಮನೆ ಮುಂದೆ ಚೇಂಬರ್ ಮೂಲಕ ಬುಗ್ಗೆಯಾಗಿ ಉಕ್ಕುತ್ತದೆ.ಅದರ ಸುವಾಸನೆ ತಗೆದುಕೊಳ್ಳುವ ಸ್ಥಿತಿ ನಿಮಗೆ ಬೇಕಾ ಎಂದು ಪ್ರಶ್ನಿಸಿದ ನಡಹಳ್ಳಿ, ನಮ್ಮ ಸರ್ಕಾರದ ಅವಧಿಯಲ್ಲಿ ಟೆಂಡರ್ ಮೂಲಕ ಕೆಲಸ ಕೊಟ್ಟಿದ್ದೇವೆ.ಆದರೆ ಇವರು ಮಾತ್ರ ಎಲ್ಲವೂ ಲ್ಯಾಂಡ್ ಆರ್ಮಿಗೆ ಕೆಲಸ ಕೊಡುತ್ತಿದ್ದಾರೆ.ಸುರೇಶ ನಾಡಗೌಡ ಒಬ್ಬರೇ ಈ ತಾಲ್ಲೂಕು ಆಳುತ್ತಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಕಷ್ಟ,ತೊಂದರೆ ಎಂದಾಗ ಸಹಾಯ,ಸಹಕಾರ ಮಾಡಿದ್ದೇನೆ.ಅದನ್ನೇ ಬೇರೊಂದು ಕ್ಷೇತ್ರದಲ್ಲಿ ಅಭಿವೃದ್ಧಿಗೆ ಖರ್ಚು ಮಾಡಿದ್ದರೆ ಸಾಯೋತನಕ ನನ್ನನ್ನು ಎಂ.ಎಲ್.ಎ ಮಾಡುತ್ತಿದ್ದರು.ಆದರೆ ನೀವು ಆಯ್ಕೆ ಮಾಡಿ ಕಳಿಸುವ ಜನಪ್ರತಿನಿಧಿ ಜನಪರ,ಬುದ್ಧಿವಂತನಾಗಿದ್ದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ.ಆದರೆ ನಿದ್ದೆ ಮಾಡುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಿ ಕಳಿಸಿದ್ದೀರಿ ಎಂದು ಹೇಳಿದರು.

ಮುದ್ದೇಬಿಹಾಳದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 2.86 ಕೋಟಿ ರೂ.ಕೈಕಾಲು ಬಿದ್ದು ಅನುದಾನ ಬಿಡುಗಡೆ ಮಾಡಿಸಿದ್ದೆ.ಆದರೆ ಅದು ಏನಾಯಿತು ಎಂದು ಗೊತ್ತಿಲ್ಲ.ಅದನ್ನು ಪೂರ್ತಿ ಲೂಟಿ ಹೊಡೆದಿದ್ದಾರೆ ಎನ್ನಿಸುತ್ತದೆ.ಶಾಲೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿಸಿದ್ದೆ.ಉರ್ದು ಶಾಲೆಯ ಅಭಿವೃದ್ಧಿಗೆ 60 ಲಕ್ಷ ಹಣಕಾಸು ಮಂಜೂರಾತಿ ದೊರೆತಿತ್ತು. ಮುಸಲ್ಮಾನ ಬಂಧುಗಳ ಒಂದೇ ಒಂದು ಓಟು ಹಾಕಲಿಲ್ಲ. ಆದರೆ ಅಭಿವೃದ್ಧಿ ವಿಷಯ ಬಂದಾಗ ಜಾತಿ,ಮತ ಧರ್ಮ ನೋಡದೇ ಸಹಾಯ ಮಾಡಿದ್ದೇನೆ.ಉರ್ದು ಶಾಲೆಯ ಅಭಿವೃದ್ಧಿಗೆ ಕೊಟ್ಟ ಅನುದಾನ ಏನಾಯಿತು ಎಂದು ಮೌನವಾಗಿರುವ ಮುಸ್ಲಿಂ ಸಮಾಜದ ಕಾಂಗ್ರೆಸ್ ಮುಖಂಡರು ನಿದ್ದೆ ಮಾಡುತ್ತಿದ್ದೀರಾ. ನಿಮ್ಮ ನಾಯಕನನ್ನು ಕೊರಳುಪಟ್ಟಿ ಹಿಡಿದು ಕೇಳಿ ಎಂದು ಹೇಳಿದರು.

ಇದು ನನ್ನ ಕೊನೆಯ ಚುನಾವಣೆ ಎಂದಿದ್ದರು.ಆದರೆ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಜೀವನ ಪರ್ಯಂತ ರಾಜಕಾರಣ ಬಿಡುವುದಿಲ್ಲ ಎಂಬುದು ನನಗೆ ಗೊತ್ತಿದೆ.ಅಣ್ಣ,ಕಾಕಾ,ತಮ್ಮ ಎಂದರೆ ಸಾಕು ಕೆಲಸ ಮಾಡಿ ,ಬಿಡಿ ಬೆಂಗಳೂರಲ್ಲಿ ನಿದ್ದೆ ಮಾಡಿದರೂ ಯಾರೂ ಕೇಳುವವರಿಲ್ಲ.ತಾಲ್ಲೂಕಿನ ಜನತೆ ಎಚ್ಚೆತ್ತುಕೊಳ್ಳಬೇಕು.ಜಾತಿ ಧರ್ಮದ ಆಧಾರದ ಮೇಲೆ ಓಟು ಹಾಕುವುದನ್ನು ಬಿಡಿ.ಪುರಸಭೆ,ಜಿಪಂ, ತಾಪಂ ಚುನಾವಣೆಗಳಲ್ಲಿ ನನ್ನ ಜೊತೆಗೆ ಕೈ ಜೋಡಿಸಬೇಕು.ಜನರು ಎಚ್ಚೆತ್ತುಕೊಳ್ಳಿ ಎಂದು ಕೈ ಮುಗಿದು ಜನರಲ್ಲಿ ವಿನಂತಿಸುತ್ತೇನೆ.ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ ಎಂದು ನಡಹಳ್ಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರಭು ಕಡಿ, ಸಂಜೀವ ಬಾಗೇವಾಡಿ, ಗಿರೀಶಗೌಡ ಪಾಟೀಲ,ಮದನಸ್ವಾಮಿ ಹಿರೇಮಠ, ಪರಶುರಾಮ ನಾಲತವಾಡ, ಬಸಯ್ಯ ನಂದಿಕೇಶ್ವರಮಠ,ಅಶೋಕ ಚಿನಿವಾರ, ಹುಲಗಪ್ಪ ಕಿಲಾರಟ್ಟಿ, ನಾಗೇಶ ಕವಡಿಮಟ್ಟಿ, ಪುನೀತ ಹಿಪ್ಪರಗಿ, ನಿಖಿಲ ಮಲಗಲದಿನ್ನಿ, ಶಿವು ಬಿರಾದಾರ,ಅನಿಲ ರಾಠೋಡ, ಶಿವು ಲದ್ದಿಮಠ, ಗೌರಮ್ಮ ಹುನಗುಂದ, ಕಾವೇರಿ ಕುಂಬಾರ, ಪ್ರೀತಿ ಕುಂಬಾರ ಮೊದಲಾದವರು ಇದ್ದರು.

ಅವನ್ಯಾವನೋ ಪಟ್ಟಿ ಕೊಡುತ್ತಾ ತಿರುಗಾಡುತ್ತಿದ್ದಾನೆ ; ನಡಹಳ್ಳಿ ಲೇವಡಿ
ಮುದ್ದೇಬಿಹಾಳ ಬಜಾರ್‌ದ ವ್ಯಾಪಾರಸ್ಥರು ರಸ್ತೆ ಧೂಳುಮಯವಾಗಿತ್ತು.ಈಗ ರಸ್ತೆ ಧೂಳುಮುಕ್ತವಾಗಿದೆ. ಅಂಬೇಡ್ಕರ್ ಮೂರ್ತಿ ಸ್ಥಾಪನೆ ಮಾಡಿದ್ದು ಅಲ್ಲಿ ಕೆಲಸ ಮಾಡಿದವರಿಗೆ ಬಿಲ್ ಕೊಟ್ಟಿಲ್ಲ.ನನ್ನ ತಾಳ್ಮೆಗೂ ಮಿತಿ ಇದೆ ನಾಡಗೌಡರೆ ? ಕಾಲ ಹೀಗೆ ಇರಲ್ಲ.ಇಡೀ ಊರು ಹಾಳಾಗಿದೆ.ಪುರಸಭೆ,ಪೊಲೀಸ್ ಠಾಣೆಯಂತೂ ಏನು ಉಳಿದಿಲ್ಲ.ಕಳಪೆ ಕಾಮಗಾರಿ ನಿಲ್ಲಿಸಬೇಕು. ನಾಲತವಾಡ ಭಾಗದಲ್ಲಿ 90 ಸಾವಿರ ರೂ.ಕಂಬದ ಎಸ್ಟಿಮೇಟ್ ಇತ್ತು,ಆದರೆ 10 ಸಾವಿರ ರೂ.ಕಂಬ ಹಾಕಿಸಿದ್ದೀರಿ.ಅವನ್ಯಾವನೋ ಪಟ್ಟಿ ಕೊಡುತ್ತಾ ತಿರುಗಾಡುತ್ತಿದ್ದಾನೆ.ನಾಲತವಾಡ ಕೆಇಬಿಯಿಂದ ಊರೊಳಕ್ಕೆ ಹಾಕಿರುವ ಕಂಬಗಳ ಗುಣಮಟ್ಟ ನೋಡಿ ಎಂದು ನಡಹಳ್ಳಿ ಹೇಳಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ