ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಹಾಗೂ ಎಕ್ಸಪರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದಕ್ಕೆ ವಿದ್ಯಾರ್ಥಿಗಳ ಸಾಧನೆಯೇ ಕಾರಣವಾಗಿದೆ.ಹೆಣ್ಣು ಮಕ್ಕಳು ಸಮಾಜದಲ್ಲಿ ಹಿಂಜಯರಿಯದೇ ಸಾಧನೆ ಮಾಡಬೇಕು.ಎಲ್ಲಿಯವರೆಗೆ ತಾವು ಶೈಕ್ಷಣಿಕವಾಗಿ ಗುರಿ ಹೊಂದಿದ್ದೀರೋ ಅಲ್ಲಿಯವರೆಗೂ ರಾಜ್ಯ ಮತ್ತು ರಾಷ್ಟçಮಟ್ಟದ ಸಾಧನೆ ತಮ್ಮದಾಗಲಿ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಬದುಕು ರೂಪಿಸುವ ಶಿಕ್ಷಣ ನೀಡುತ್ತಿದ್ದೇವೆ.ನಮ್ಮಲ್ಲಿ ಗುಣಮಟ್ಟದ ಹಾಗೂ ಅತ್ಯುನ್ನತ ಶೈಕ್ಷಣಿಕ ಮಾರ್ಗದರ್ಶನ ದೊರೆಯುತ್ತಿರುವುದರಿಂದಲೇ ಪಾಲಕರು,ವಿದ್ಯಾರ್ಥಿಗಳು ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.ನಿರಂತರ ರಾಜ್ಯಮಟ್ಟದ ಸಾಧನೆ ಸುಲಭವಾದ ಮಾತಲ್ಲ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಾಲತವಾಡದ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ,ಎರಡನೇ ಸ್ಥಾನ ಪಡೆದುಕೊಂಡ ಕುದುರಿಸಾಲವಾಡಗಿಯ ಅಪೂರ್ವಾ ಮೂಲಿಮನಿ ಅವರನ್ನು ಸಂಸ್ಥೆಯಿAದ ಸನ್ಮಾನಿಸಲಾಯಿತು.ಶಾಸಕರು ಇಬ್ಬರು ಸಾಧಕ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ.ಪ್ರೋತ್ಸಾಹಧನದ ಚೆಕ್ ನೀಡಿದರು.ನಾಲತವಾಡದ ಗಣ್ಯರಾದ ಶಿವಪ್ಪಗೌಡ ತಾತರಡ್ಡಿ,ಎ.ಜಿ.ಗಂಗನಗೌಡ್ರ(ಗುOಡುಸಾಹುಕಾರ), ರಾಯನಗೌಡ ತಾತರಡ್ಡಿ, ಪ್ರಾಚಾರ್ಯ ಇಸ್ಮಾಯಿಲ್ ಮನಿಯಾರ,ಎನ್.ಎ.ಬಿರಾಜದಾರ,ವಿಜಯಕುಮಾರ ಪಾಟೀಲ,ರೇವಣಸಿದ್ದ ಚಲವಾದಿ, ರಾಜಶೇಖರ ಹಿರೇಮಠ,ಪ್ರಮೋದ ಯರಗುಂಟಿ,ಮAಜುನಾಥ ಮಂಕಣಿ, ಸಾಧಕರ ಪಾಲಕರಾದ ಡಾ.ಸಿದ್ದನಗೌಡ ಪಾಟೀಲ, ಸಿದ್ದನಗೌಡ ಮೂಲಿಮನಿ, ಸಂಗಣ್ಣ ಪತ್ತಾರ, ಜೆ.ಡಿ.ಮುಲ್ಲಾ ಮೊದಲಾದವರು ಇದ್ದರು.

ಎಂ.ಎಸ್.ಪಾಟೀಲರು ಒಬ್ಬ ತತ್ವಜ್ಞಾನಿ-ಶಾಸಕ ನಾಡಗೌಡರ ಪ್ರಶಂಸೆ ಶೈಕ್ಷಣಿಕ ಕ್ಷೇತ್ರದಲ್ಲಿ ಸತತ ಸಾಧನೆ ಮಾಡುತ್ತಿರುವ ನಾಗರಬೆಟ್ಟದ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಂ.ಎಸ್.ಪಾಟೀಲರು ತಾವು ಉನ್ನತ ವಿದ್ಯಾಭ್ಯಾಸ ಮಾಡದೇ ಇದ್ದರೂ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಪ್ರಾಥಮಿಕ ಹಂತದಲ್ಲೇ ಖ್ಯಾತಿ ಪಡೆದಿರುವ ಈ ಸಂಸ್ಥೆಯಿOದ ದೇಶ ನಾನಾ ಕಡೆಗಳಲ್ಲಿ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ನಿಜಕ್ಕೂ ಅವರೊಬ್ಬ ತತ್ವಜ್ಞಾನಿ ಎಂದು ಬಣ್ಣಿಸಿದರಲ್ಲದೇ ಸಂಸ್ಥೆಯ ಸಾಧನೆ ಮುಂದುವರೆಯಲಿ ಎಂದು ಶಾಸಕ ನಾಡಗೌಡರು ಪ್ರಶಂಸೆ ವ್ಯಕ್ತಪಡಿಸಿದರು.

ನಾವು ಯಾವುದೇ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಳ್ಳುವುದಿಲ್ಲ.ಸಾಧನೆ ಮಾಡಿದ ವಿದ್ಯಾರ್ಥಿಗಳು ಯಾವುದೇ ಸಂಸ್ಥೆಯವರಾದರೂ ಅವರನ್ನು ಅಭಿನಂದಿಸುವುದು ನಮ್ಮ ಧರ್ಮ.ಪಾಲಕರು,ವಿದ್ಯಾರ್ಥಿಗಳು ನಮ್ಮಲ್ಲಿ ದೊರೆಯುವ ಶಿಕ್ಷಣ ನೋಡಿ ಬರುತ್ತಾರೆಯೇ ಹೊರತು ಯಾವುದೇ ಆಸೆ,ಆಮಿಷಗಳಿಗೆ ಒಳಗಾಗಿ ಪ್ರವೇಶ ಪಡೆದುಕೊಳ್ಳುವುದಿಲ್ಲ.ಕೆಲವರು ನಮ್ಮ ಸಂಸ್ಥೆಯ ಕುರಿತು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ.ಅದಕ್ಕೆಲ್ಲ ಕಿವಿಗೊಡುವುದಿಲ್ಲ.
–ಅಮೀತಗೌಡ ಎಂ.ಪಾಟೀಲ,ಆಡಳಿತಾಧಿಕಾರಿ, ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ,ನಾಗರಬೆಟ್ಟ

Latest News

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮರ ಬಿದ್ದು ಕೆಎಸ್‌ಆರ್‌ಟಿಸಿ ನಿವೃತ್ತ ಕಂಟ್ರೋಲರ್ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಭಾರಿ ಬಿರುಗಾಳಿಗೆ ಬೃಹತ್ ಬೇವಿನ ಮರವೊಂದು ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಕೋಳೂರ್ ಕ್ರಾಸ್ ಹತ್ತಿರ ತುಂಡರಿಸಿರುವ ಕಾರಣ ಮೇ.4 ರಂದು ಮುದ್ದೇಬಿಹಾಳ ಪಟ್ಟಣಕ್ಕೆ ಒಂದು ದಿನದ ಮಟ್ಟಿಗೆ ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಸಹಕರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ ಜಾವೇದ ನಾಯ್ಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ. ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿAದ ವಿಜಯಪುರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆ