ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಹಾಗೂ ಎಕ್ಸಪರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದಕ್ಕೆ ವಿದ್ಯಾರ್ಥಿಗಳ ಸಾಧನೆಯೇ ಕಾರಣವಾಗಿದೆ.ಹೆಣ್ಣು ಮಕ್ಕಳು ಸಮಾಜದಲ್ಲಿ ಹಿಂಜಯರಿಯದೇ ಸಾಧನೆ ಮಾಡಬೇಕು.ಎಲ್ಲಿಯವರೆಗೆ ತಾವು ಶೈಕ್ಷಣಿಕವಾಗಿ ಗುರಿ ಹೊಂದಿದ್ದೀರೋ ಅಲ್ಲಿಯವರೆಗೂ ರಾಜ್ಯ ಮತ್ತು ರಾಷ್ಟçಮಟ್ಟದ ಸಾಧನೆ ತಮ್ಮದಾಗಲಿ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಬದುಕು ರೂಪಿಸುವ ಶಿಕ್ಷಣ ನೀಡುತ್ತಿದ್ದೇವೆ.ನಮ್ಮಲ್ಲಿ ಗುಣಮಟ್ಟದ ಹಾಗೂ ಅತ್ಯುನ್ನತ ಶೈಕ್ಷಣಿಕ ಮಾರ್ಗದರ್ಶನ ದೊರೆಯುತ್ತಿರುವುದರಿಂದಲೇ ಪಾಲಕರು,ವಿದ್ಯಾರ್ಥಿಗಳು ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.ನಿರಂತರ ರಾಜ್ಯಮಟ್ಟದ ಸಾಧನೆ ಸುಲಭವಾದ ಮಾತಲ್ಲ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಾಲತವಾಡದ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ,ಎರಡನೇ ಸ್ಥಾನ ಪಡೆದುಕೊಂಡ ಕುದುರಿಸಾಲವಾಡಗಿಯ ಅಪೂರ್ವಾ ಮೂಲಿಮನಿ ಅವರನ್ನು ಸಂಸ್ಥೆಯಿAದ ಸನ್ಮಾನಿಸಲಾಯಿತು.ಶಾಸಕರು ಇಬ್ಬರು ಸಾಧಕ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ.ಪ್ರೋತ್ಸಾಹಧನದ ಚೆಕ್ ನೀಡಿದರು.ನಾಲತವಾಡದ ಗಣ್ಯರಾದ ಶಿವಪ್ಪಗೌಡ ತಾತರಡ್ಡಿ,ಎ.ಜಿ.ಗಂಗನಗೌಡ್ರ(ಗುOಡುಸಾಹುಕಾರ), ರಾಯನಗೌಡ ತಾತರಡ್ಡಿ, ಪ್ರಾಚಾರ್ಯ ಇಸ್ಮಾಯಿಲ್ ಮನಿಯಾರ,ಎನ್.ಎ.ಬಿರಾಜದಾರ,ವಿಜಯಕುಮಾರ ಪಾಟೀಲ,ರೇವಣಸಿದ್ದ ಚಲವಾದಿ, ರಾಜಶೇಖರ ಹಿರೇಮಠ,ಪ್ರಮೋದ ಯರಗುಂಟಿ,ಮAಜುನಾಥ ಮಂಕಣಿ, ಸಾಧಕರ ಪಾಲಕರಾದ ಡಾ.ಸಿದ್ದನಗೌಡ ಪಾಟೀಲ, ಸಿದ್ದನಗೌಡ ಮೂಲಿಮನಿ, ಸಂಗಣ್ಣ ಪತ್ತಾರ, ಜೆ.ಡಿ.ಮುಲ್ಲಾ ಮೊದಲಾದವರು ಇದ್ದರು.

ಎಂ.ಎಸ್.ಪಾಟೀಲರು ಒಬ್ಬ ತತ್ವಜ್ಞಾನಿ-ಶಾಸಕ ನಾಡಗೌಡರ ಪ್ರಶಂಸೆ ಶೈಕ್ಷಣಿಕ ಕ್ಷೇತ್ರದಲ್ಲಿ ಸತತ ಸಾಧನೆ ಮಾಡುತ್ತಿರುವ ನಾಗರಬೆಟ್ಟದ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಂ.ಎಸ್.ಪಾಟೀಲರು ತಾವು ಉನ್ನತ ವಿದ್ಯಾಭ್ಯಾಸ ಮಾಡದೇ ಇದ್ದರೂ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಪ್ರಾಥಮಿಕ ಹಂತದಲ್ಲೇ ಖ್ಯಾತಿ ಪಡೆದಿರುವ ಈ ಸಂಸ್ಥೆಯಿOದ ದೇಶ ನಾನಾ ಕಡೆಗಳಲ್ಲಿ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ನಿಜಕ್ಕೂ ಅವರೊಬ್ಬ ತತ್ವಜ್ಞಾನಿ ಎಂದು ಬಣ್ಣಿಸಿದರಲ್ಲದೇ ಸಂಸ್ಥೆಯ ಸಾಧನೆ ಮುಂದುವರೆಯಲಿ ಎಂದು ಶಾಸಕ ನಾಡಗೌಡರು ಪ್ರಶಂಸೆ ವ್ಯಕ್ತಪಡಿಸಿದರು.

ನಾವು ಯಾವುದೇ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಳ್ಳುವುದಿಲ್ಲ.ಸಾಧನೆ ಮಾಡಿದ ವಿದ್ಯಾರ್ಥಿಗಳು ಯಾವುದೇ ಸಂಸ್ಥೆಯವರಾದರೂ ಅವರನ್ನು ಅಭಿನಂದಿಸುವುದು ನಮ್ಮ ಧರ್ಮ.ಪಾಲಕರು,ವಿದ್ಯಾರ್ಥಿಗಳು ನಮ್ಮಲ್ಲಿ ದೊರೆಯುವ ಶಿಕ್ಷಣ ನೋಡಿ ಬರುತ್ತಾರೆಯೇ ಹೊರತು ಯಾವುದೇ ಆಸೆ,ಆಮಿಷಗಳಿಗೆ ಒಳಗಾಗಿ ಪ್ರವೇಶ ಪಡೆದುಕೊಳ್ಳುವುದಿಲ್ಲ.ಕೆಲವರು ನಮ್ಮ ಸಂಸ್ಥೆಯ ಕುರಿತು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ.ಅದಕ್ಕೆಲ್ಲ ಕಿವಿಗೊಡುವುದಿಲ್ಲ.
–ಅಮೀತಗೌಡ ಎಂ.ಪಾಟೀಲ,ಆಡಳಿತಾಧಿಕಾರಿ, ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ,ನಾಗರಬೆಟ್ಟ

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,