ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು ಏನು ಹೇಳುವ ಅವಶ್ಯಕತೆ ಇಲ್ಲ. ಬಂಗಾರಪ್ಪನವರ ಸಂಪುಟದಲ್ಲಿ ನಾನು ಅವರು ಕೂಡಿಯೇ ಕೆಲಸ ಮಾಡಿದವರು.ಅನೇಕ ಬಾರಿ ನಾಡಗೌಡರು ಪಕ್ಷಕ್ಕೆ ತ್ಯಾಗ ಮಾಡಿದ್ದಾರೆ.ಅವರು ಹಾಗೂ ನಿವೆಲ್ಲ ನಮ್ಮ ಮೇಲೆ ಇಟ್ಟಿರುವ ಅಭಿಮಾನದ ಬಗ್ಗೆ ಅರಿವಿದೆ.ನನಗೂ ಅವರಿಗೂ 40 ವರ್ಷದ ಗೆಳೆತನದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ.ಅವರು ಆರು ಬಾರಿ ಗೆದ್ದಿದ್ದಾರೆ.ಅವರ ವಿಚಾರದಲ್ಲಿ ವರಿಷ್ಠರಿಗೆ ಏನು ತಿಳಿಸಬೇಕು,ಮಂಡಿಸಬೇಕು ನಾನು ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದ್ದಾರೆ. ನನ್ನ ಮೇಲೆ ನಾಡಗೌಡರು ಹೇಗೆ ವಿಶ್ವಾಸ ಇಟ್ಟಿದ್ದಾರೆ ಎಂಬುದರ ಅರಿವಿದೆ.ಪಕ್ಷದ ನಿಷ್ಠೆಗೆ ಎಲ್ಲರೂ ಸೇರಿ ದುಡಿದಿದ್ದಕ್ಕೆ ಸರಕಾರ ಬಂದಿದೆ.ರಾಜಕಾರಣ ವ್ಯವಸಾಯ ಇದ್ದಂತೆ.ಹಲವಾರು ವರ್ಷಗಳಿಂದ ದುಡಿಯಬೇಕು.ನಿಮ್ಮ ಕ್ಷೇತ್ರಕ್ಕೆ ನಾನು ಬರುತ್ತೇನೆ.ನಾಡಗೌಡರಿಗೆ ಒಳ್ಳೆಯದಾಗಲಿ ಎಂದು ಸಿಎಂ ಹೇಳಿದರು.

ಶಾಸಕ ನಾಡಗೌಡರಿಗೆ ನ್ಯಾಯ ಸಿಗಬೇಕು-ಬಿ.ಕೆ.ಹರಿಪ್ರಸಾದ್
ಮುದ್ದೇಬಿಹಾಳ : ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರಿಗೆ ಡಿ.ಕೆ.ಶಿವಕುಮಾರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮುದ್ದೇಬಿಹಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುವ ಕಾರ್ಯ ಮಾಡಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದ ಮುದ್ದೇಬಿಹಾಳ,ತಾಳಿಕೋಟಿ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಾಗೂ ಜಿಲ್ಲಾ,ತಾಪಂ ಮತಕ್ಷೇತ್ರಗಳ ಮಾಜಿ ಸದಸ್ಯರು,ಪಕ್ಷದ ಮುಖಂಡರು,ಸರ್ಕಾರ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ತೆರಳಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾರ್ಯಕರ್ತರು,ಪಕ್ಷದ ಮುಖಂಡರ ಮನವಿ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮಾತನಾಡಿ, ಪಕ್ಷದಲ್ಲಿ ಹಿರಿಯ ಶಾಸಕರಾಗಿರುವ ನಾಡಗೌಡರಿಗೆ ನ್ಯಾಯ ಸಿಗಬೇಕು ಎಂಬುದು ನನ್ನ ಮನಸ್ಸಲ್ಲಿಯೂ ಇದೆ.ವಿಜಯಪುರದಲ್ಲಿರುವವರು ಎಲ್ಲರೂ ಹಿರಿಯರಿ ಶಾಸಕರಿದ್ದಾರೆ.ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡೋಣ.ನೀವು ಕೊಟ್ಟಿರುವ ಮನವಿಯನ್ನು ಯಥಾವತ್ತಾಗಿ ಪಕ್ಷದ ಹೈಕಮಾಂಡ್‌ನ ವರಿಷ್ಠರಾದ ರಾಹುಲ್ ಗಾಂಧಿ,ಪಕ್ಷದ ರಾಷ್ಟಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರುವೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಬಾಲಾಜಿ ಶುರ‍್ಸ್ನ ನಿರ್ದೇಶಕ ರಾಹುಲ್‌ಗೌಡ ಪಾಟೀಲ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪ್ರಮುಖರಾದ ಎ.ಗಣೇಶ ನಾರಾಯಣಸ್ವಾಮಿ,ರಮೇಶ ಓಸ್ವಾಲ್, ದಾನಪ್ಪ ನಾಗಠಾಣ,ಎಸ್.ಎಸ್.ಹುಲ್ಲೂರ,ಶಿವಶಂಕರಗೌಡ ಹಿರೇಗೌಡರ,ಪ್ರಭುರಾಜ ಕಲ್ಬುರ್ಗಿ,ಶ್ರೀಕಾಂತ ಚಲವಾದಿ,ಸಿಕಂದರ್ ಜಾನ್ವೇಕರ್,ಬಾಪುರಾಯ ದೇಸಾಯಿ,ರಾಜು ಕರಡ್ಡಿ,ರಾಯನಗೌಡ ತಾತರೆಡ್ಡಿ,ಸಂತೋಷ ಚವ್ಹಾಣ(ಹುಲ್ಲೂರ),ಕಾಶೀಂಪಟೇಲ್ ಮೂಕಿಹಾಳ, ವಾಯ್.ಎಚ್.ವಿಜಯಕರ್, ಎಸ್.ಎಸ್.ಮಾಲಗತ್ತಿ, ಎಂ.ಎಚ್.ಹಾಲಣ್ಣವರ,ಯಲ್ಲಪ್ಪ ಚಲವಾದಿ,ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ಮಾಜಿ ಅಧ್ಯಕ್ಷ ಶೋಭಾ ಶೆಳ್ಳಗಿ,ಸರಸ್ವತಿ ಪೀರಾಪೂರ,ನೀಲಮ್ಮ ಬೋರಾವತ್,ಕಮಲಾ ಭಜಂತ್ರಿ,ನೀಲಮ್ಮ ಚಲವಾದಿ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರು ನಿಯೋಗದಲ್ಲಿ ತೆರಳಿ ನಾಡಗೌಡರಿಗೆ ಮಂತ್ರಿ ಸ್ಥಾನ ನೀಡುವಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಮಾಜಿ ಸಿಎಂಗೂ ಭೇಟಿ: ಮಾಜಿ ಸಿಎಂ,ಸಿಡಬ್ಲೂö್ಯಸಿ ಸಮೀತಿ ಸದಸ್ಯರಾದ ಸಿದ್ಧರಾಮಯ್ಯ ಅವರನ್ನು ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಮುಖಂಡರು ಭೇಟಿಯಾಗಿ ಒತ್ತಡ ಹೇರಿದ್ದಾರೆ.ಸಿಎಂ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಂದ ನಾಡಗೌಡರಿಗೆ ಮಂತ್ರಿ ಸ್ಥಾನ ಕಲ್ಪಿಸುವ ಕುರಿತು ಸಕಾರಾತ್ಮಕ ಭರವಸೆ ದೊರೆತಿದೆ ಎಂದು ಮುಖಂಡರಾದ ಬಿ.ಕೆ.ಬಿರಾದಾರ,ಎ.ಗಣೇಶ ನಾರಾಯಣಸ್ವಾಮಿ ತಿಳಿಸಿದ್ದಾರೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ