ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಉಮೇಶ ಮೇಟಿ ಅವರ ಗೆಲುವಿಗೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ,ಉಸ್ತುವಾರಿ ವಹಿಸಿಕೊಂಡಿದ್ದ ಬಿ.ಕೆ.ಹರಿಪ್ರಸಾದ್,ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಸೇರಿದಂತೆ ಸಚಿವರು,ಶಾಸಕರು,ಪಕ್ಷದ ಕಾರ್ಯಕರ್ತರು ಹಗಲಿರಳು ಶ್ರಮಿಸಿ ಮೇಟಿ ಅವರ ಗೆಲುವು ತಂದುಕೊಟ್ಟಿದ್ದಾರೆ ಎಂದು ತಿಳಿಸಿದರು.
ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯ ಉಸ್ತುವಾರಿಯನ್ನು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ವಹಿಸಲಾಗಿತ್ತು.ಕಳೆದ ಬಾರಿ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಎಂಟು ಸಾವಿರ ಮತಗಳ ಅಂತರದ ಲೀಡ್ನ್ನು ತಂದುಕೊಡಲು ನಮ್ಮ ನಾಯಕರು ಶ್ರಮಿಸಿದ್ದಾರೆ.ಅದೇ ಜಿಪಂ ಕ್ಷೇತ್ರಕ್ಕೆ ಇಲ್ಲಿನ ಮಾಜಿ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ ಅವರು ಉಸ್ತುವಾರಿಗಳಾಗಿದ್ದರು.ಚುನಾವಣೆ ಪ್ರಚಾರದ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಗೆ 20 ಸಾವಿರ ಲೀಡ್ ತಂದುಕೊಡುವುದಾಗಿ ಭಾಷಣ ಮಾಡಿದ್ದರು.ಒಂದು ವೇಳೆ ಲೀಡ್ ತಂದುಕೊಡದಿದ್ದರೆ ನನ್ನ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು.ಅದರಂತೆ ನಡಹಳ್ಳಿಯವರು ಮಾತುಕೊಟ್ಟಂತೆ ತಮ್ಮ ರೈತಮೋರ್ಚಾ ರಾಜ್ಯ ಘಟಕದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕುಂಟೋಜಿ ಸಲಹೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಸಮೀತಿ ತಾಲ್ಲೂಕು ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ಸರ್ಕಾರಿ ಆಸ್ಪತ್ರೆ ನಾಮನಿರ್ದೇಶಿತ ಸದಸ್ಯ ಮಹ್ಮದರಫೀಕ ಶಿರೋಳ,ಪಕ್ಷದ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಭಜಂತ್ರಿ ಮಾತನಾಡಿದರು.ಪಕ್ಷದ ಪದಾಧಿಕಾರಿಗಳಾದ ಸರಸ್ವತಿ ಪೀರಾಪೂರ,ಮಾಬುಬಿ ಬಾಗವಾನ,ಸುಜಾತಾ ಸಿಂಧೆ,ಹೀನಾ ಕೌಸರ,ಸುಚೀತ ಚಳಗೇರಿ,ಸಮೀರ ದ್ರಾಕ್ಷಿ ಮತ್ತಿತರರು ಇದ್ದರು.
ಕಾಂಗ್ರೆಸ್ ಗೆಲುವು : ಕಾರ್ಯಕರ್ತರ ವಿಜಯೋತ್ಸವ:
ಬಾಗಲಕೋಟ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಎನ್.ಎಸ್.ಯೂ.ಐ,ಯುವ ಕಾಂಗ್ರೆಸ್,ಮಹಿಳಾ ಕಾಂಗ್ರೆಸ್ ಘಟಕದವರು ಬಸವೇಶ್ವರ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳೇ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿವೆ ಎಂದು ಮುಖಂಡ ಸದ್ದಾಂ ಕುಂಟೋಜಿ,ಮಹ್ಮದರಫೀಕ ಶಿರೋಳ ಹೇಳಿದರು.ಪಕ್ಷದ ಮೂರು ಘಟಕದ ಪದಾಧಿಕಾರಿಗಳು ಇದ್ದರು.







