ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಉಮೇಶ ಮೇಟಿ ಅವರ ಗೆಲುವಿಗೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ,ಉಸ್ತುವಾರಿ ವಹಿಸಿಕೊಂಡಿದ್ದ ಬಿ.ಕೆ.ಹರಿಪ್ರಸಾದ್,ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಸೇರಿದಂತೆ ಸಚಿವರು,ಶಾಸಕರು,ಪಕ್ಷದ ಕಾರ್ಯಕರ್ತರು ಹಗಲಿರಳು ಶ್ರಮಿಸಿ ಮೇಟಿ ಅವರ ಗೆಲುವು ತಂದುಕೊಟ್ಟಿದ್ದಾರೆ ಎಂದು ತಿಳಿಸಿದರು.

ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯ ಉಸ್ತುವಾರಿಯನ್ನು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ವಹಿಸಲಾಗಿತ್ತು.ಕಳೆದ ಬಾರಿ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಎಂಟು ಸಾವಿರ ಮತಗಳ ಅಂತರದ ಲೀಡ್‌ನ್ನು ತಂದುಕೊಡಲು ನಮ್ಮ ನಾಯಕರು ಶ್ರಮಿಸಿದ್ದಾರೆ.ಅದೇ ಜಿಪಂ ಕ್ಷೇತ್ರಕ್ಕೆ ಇಲ್ಲಿನ ಮಾಜಿ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ ಅವರು ಉಸ್ತುವಾರಿಗಳಾಗಿದ್ದರು.ಚುನಾವಣೆ ಪ್ರಚಾರದ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಗೆ 20 ಸಾವಿರ ಲೀಡ್ ತಂದುಕೊಡುವುದಾಗಿ ಭಾಷಣ ಮಾಡಿದ್ದರು.ಒಂದು ವೇಳೆ ಲೀಡ್ ತಂದುಕೊಡದಿದ್ದರೆ ನನ್ನ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು.ಅದರಂತೆ ನಡಹಳ್ಳಿಯವರು ಮಾತುಕೊಟ್ಟಂತೆ ತಮ್ಮ ರೈತಮೋರ್ಚಾ ರಾಜ್ಯ ಘಟಕದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕುಂಟೋಜಿ ಸಲಹೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಸಮೀತಿ ತಾಲ್ಲೂಕು ಉಪಾಧ್ಯಕ್ಷ ಲಕ್ಷö್ಮಣ ಲಮಾಣಿ, ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ಸರ್ಕಾರಿ ಆಸ್ಪತ್ರೆ ನಾಮನಿರ್ದೇಶಿತ ಸದಸ್ಯ ಮಹ್ಮದರಫೀಕ ಶಿರೋಳ,ಪಕ್ಷದ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಭಜಂತ್ರಿ ಮಾತನಾಡಿದರು.ಪಕ್ಷದ ಪದಾಧಿಕಾರಿಗಳಾದ ಸರಸ್ವತಿ ಪೀರಾಪೂರ,ಮಾಬುಬಿ ಬಾಗವಾನ,ಸುಜಾತಾ ಸಿಂಧೆ,ಹೀನಾ ಕೌಸರ,ಸುಚೀತ ಚಳಗೇರಿ,ಸಮೀರ ದ್ರಾಕ್ಷಿ ಮತ್ತಿತರರು ಇದ್ದರು.

ಕಾಂಗ್ರೆಸ್ ಗೆಲುವು : ಕಾರ್ಯಕರ್ತರ ವಿಜಯೋತ್ಸವ:
ಬಾಗಲಕೋಟ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಎನ್.ಎಸ್.ಯೂ.ಐ,ಯುವ ಕಾಂಗ್ರೆಸ್,ಮಹಿಳಾ ಕಾಂಗ್ರೆಸ್ ಘಟಕದವರು ಬಸವೇಶ್ವರ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳೇ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿವೆ ಎಂದು ಮುಖಂಡ ಸದ್ದಾಂ ಕುಂಟೋಜಿ,ಮಹ್ಮದರಫೀಕ ಶಿರೋಳ ಹೇಳಿದರು.ಪಕ್ಷದ ಮೂರು ಘಟಕದ ಪದಾಧಿಕಾರಿಗಳು ಇದ್ದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್